
ಶಿವಮೊಗ್ಗ: ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ನಿರಾಸೆಗೊಂಡಿರುವ ಶಾಸಕರು ಈಗಲಾದರೂ ಕಾಂಗ್ರೆಸ್ ತಿರಸ್ಕರಿಸಿ ಬಿಜೆಪಿಗೆ ಬರುವಂತೆ ಶಾಸಕ ಕೆ.ಎಸ್.ಈಶ್ವರಪ್ಪ ಅತೃ ಪ್ತರಿಗೆ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ 104 ವಿಧಾನಸಭಾ ಕ್ಷೇತ್ರ ಗಳಲ್ಲಿ ಗೆಲುವು ಸಾಧಿಸಿದ ಸಂದರ್ಭದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗ ಬೇಕೆಂದು ಅನೇಕ ಶಾಸಕರು ಬಿಜೆಪಿಯೊಂದಿಗೆ ಚರ್ಚಿಸಿದ್ದರು. ಅವರಲ್ಲಿ ಹಲವರಿಗೆ ಸಂಪುಟದಲ್ಲಿ ಸ್ಥಾನ ಸಿಗದ ಕಾರಣ ನಿರಾಶೆಗೊಂಡಿದ್ದಾರೆ.
ಈಗಲಾದರೂ ಬೇಸರಗೊಂಡಿರುವವರು ಕಾಂಗ್ರೆಸ್ ತಿರಸ್ಕರಿಸಿ ಬಿಜೆಪಿಗೆ ಬೆಂಬಲ ನೀಡುವಂತೆ ಕೋರಿದರು. ಸಚಿವ ಸಂಪುಟ ರಚನೆ ನಂತರ ಕಾಂಗ್ರೆಸ್ ಬೆತ್ತಲಾಗಿದೆ. ಕಾಂಗ್ರೆಸ್ ಶಾಸಕರೇ ಆ ಪಕ್ಷದ ಕುರಿತು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಕಾಂಗ್ರೆಸ್ ಪಕ್ಷವನ್ನು ಮಾರಲು ಹೊರಟಿದ್ದಾರೆ ಎಂದು ಆರೋಪಿಸು ತ್ತಿದ್ದಾರೆ.
ಈಗಾಗಲೇ 22 ರಾಜ್ಯಗಳಲ್ಲಿ ಕಾಂಗ್ರೆಸ್ ಮುಕ್ತವಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತವಾಗಲಿದೆ. ಈಗಾಗಲೇ ಸಂಪುಟದಲ್ಲಿ ಸ್ಥಾನ ಸಿಗದ ಹಲವು ಶಾಸಕರು ತಮ್ಮ ನಿರ್ಧಾರವನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ಹೇಳುತ್ತಿದ್ದು, ಅವರು ಬಿಜೆಪಿಗೆ ಬರಲಿ ಎಂದು ಆಹ್ವಾನವಿತ್ತರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.