
ಬೆಂಗಳೂರು[ಜೂ.30] ವಿಧಾನಸಭಾ ಚುನಾವಣೆ ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಕೆ.ಆರ್. ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ,ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಕೋರ್ಟ್ ಮೊರೆ ಹೋಗಿದ್ದಾರೆ.
ಚುನಾವಣೆಯಲ್ಲಿ ಇವಿಎಂ ಮಿಷನ್ ಹ್ಯಾಕ್ ಮಾಡಲಾಗಿದೆ ಅನ್ನೊ ಅನುಮಾನ ಇದೆ. ಸೂಕ್ತ ತನಿಖೆ ನಡೆಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ಮತದಾರರ ಒಲವು ನಮ್ಮ ಮೇಲೆ ಹೆಚ್ಚಿದ್ದರೂ ನಾವು ಸೋತಿದ್ದೇವೆ. ಕೂಡಲೇ ಇವಿಎಂ ಯಂತ್ರ ಹ್ಯಾಕ್ ಆಗಿರೋ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ನಂತರದಲ್ಲಿ ಇಂಥಹದೆ ಆರೋಪ ಕೇಳಿ ಬಂದಿತ್ತು. ಇದಾದ ಮೇಲೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ದೋಷ ಕಂಡು ಹಿಡಿದು ತಿಳಿಸಲು ಸವಾಲು ಹಾಕಿತ್ತು. ಆದರೆ ಯಾವ ಪಕ್ಷಗಳು ಆಯೋಗದ ಸವಾಲು ಸ್ವೀಕರಿಸಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.