ಚುನಾವಣಾ ಫಲಿತಾಂಶದ ಬೆನ್ನಲ್ಲೇ ಹೊರಬಿದ್ದ ಸತ್ಯ : ವಾಮಮಾರ್ಗದಲ್ಲಿ ಸಿಕ್ತಾ ಜಯ?

Published : Sep 14, 2018, 01:42 PM ISTUpdated : Sep 19, 2018, 09:25 AM IST
ಚುನಾವಣಾ ಫಲಿತಾಂಶದ ಬೆನ್ನಲ್ಲೇ ಹೊರಬಿದ್ದ ಸತ್ಯ : ವಾಮಮಾರ್ಗದಲ್ಲಿ ಸಿಕ್ತಾ ಜಯ?

ಸಾರಾಂಶ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಇದೀಗ ಸತ್ಯವೊಂದು ಹೊರಬಿದ್ದಿದ್ದು, ಚುನಾವಣಾ ಆಯೋಗವು ಇವಿಎಂ ಅನ್ನು ತಾವು ನೀಡಿಲ್ಲ ಎಂದು ಹೇಳಿದೆ. ಇದರಿಂದ ದಿಲ್ಲಿ ವಿವಿ ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಎಬಿವಿಪಿ ವಾಮಮಾರ್ಗದ ಮೂಲಕ ಗೆಲುವು ಪಡೆಯಿತಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ. 

ನವದೆಹಲಿ :  ದಿಲ್ಲಿ ವಿಶ್ವವಿದ್ಯಾಲಯದಲ್ಲಿ  ವಿದ್ಯಾರ್ಥಿ ಪರಿಷತ್ ಗೆ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದೆ.  ಚುನಾವಣೆಯಲ್ಲಿ ಎಬಿವಿಪಿ ಮೂರು ಸ್ಥಾನಗಳಲ್ಲಿ ಗೆಲುವು ಪಡೆದಿದ್ದು, ಇದೀಗ ಇದರ ಬೆನ್ನಲ್ಲೇ ವಿವಾದವೊಂದು ಸೃಷ್ಟಿಯಾಗಿದೆ. 

ದಿಲ್ಲಿ ವಿವಿ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದ್ದು ಈ ಇವಿಎಂ ಅನ್ನು ಚುನಾವಣಾ ಆಯೋಗದಿಂದ ನೀಡಲಾಗಿಲ್ಲ. ಇದು ಖಾಸಗಿಯಾಗಿ ಪೂರೈಯಾದುದಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. 

ಚುನಾವಣೆಯಲ್ಲಿ ಇವಿಎಂ ಬಳಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಗುರುವಾರ ಮತ ಎಣಿಕೆಯನ್ನು ಕೆಲ ಸಂದರ್ಭ ನಿಲ್ಲಿಸಲಾಗಿತ್ತು. ಅದಾದ ಬಳಿಕ ಮತ್ತೆ ಎಣಿಕೆಯನ್ನು ಮುಂದುವರಿಸಲಾಯಿತು. 

ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿಯೂ ಕೂಡ ವರದಿ ಪ್ರಸಾರವಾಗಿದ್ದು, ಇದೀಗ ಚುನಾವಣಾ ಆಯೋಗವೇ ಸ್ಪಷ್ಟನೆ ನೀಡಿದೆ. ಇದಕ್ಕೆ ಚುನಾವಣಾ ಆಯೋಗವು ಇವಿಎಂ ಅನ್ನು ನೀಡಲಾಗಿಲ್ಲ. ಖಾಸಗಿಯಾಗಿ ಪೂರೈ ಮಾಡಿರುವುದಾಗಿದೆ ಎಂದು  ಹೇಳಿದೆ. 

ಆದ್ದರಿಂದ ಅಧಿಕ ಸ್ಥಾನಗಳಲ್ಲಿ ಗೆಲುವು ಪಡೆದಿದ್ದ ಎಬಿವಿಪಿ ವಾಮಮಾರ್ಗದ ಮೂಲಕ ಗೆಲುವು ಪಡೆಯಿತಾ ಎನ್ನುವ ಅನುಮಾನಗಳು ಮೂಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ