ಲೋಕಸಭಾ ಚುನಾವಣೆ : ಮಂಡ್ಯ ಫಲಿತಾಂಶದ ಬಗ್ಗೆ EVM ಮೇಲೆ ದಟ್ಟ ಅನುಮಾನ

Published : Jun 02, 2019, 03:31 PM ISTUpdated : Jun 02, 2019, 06:49 PM IST
ಲೋಕಸಭಾ ಚುನಾವಣೆ :  ಮಂಡ್ಯ ಫಲಿತಾಂಶದ ಬಗ್ಗೆ EVM ಮೇಲೆ ದಟ್ಟ ಅನುಮಾನ

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿ ಅಧಿಕಾರ ಸ್ವೀಕಾರವೂ ಆಗಿದೆ. ಆದರೆ ಇವಿಎಂ ಮೇಲಿನ ಅನುಮಾನ ಮಾತ್ರ ಇನ್ನೂ ಕೊನೆಗೊಂಡಂತೆ ಕಾಣುವುದಿಲ್ಲ.

"

ಮಂಡ್ಯ : ಜೆಡಿಎಸ್ ಭದ್ರಕೋಟೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿ ಹಲವು ದಿನಗಳೇ ಕಳೆದಿದ್ದು, ಇದೀಗ  ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. 

ನಾಗಮಂಗಲ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದು,  ಮಂಡ್ಯ ಜನರು ಪುರಸಭೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತಹಾಕಿ ಗೆಲ್ಲಿಸುತ್ತಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಅದು ಹೇಗೆ ಬೇರೆ ಅಭ್ಯರ್ಥಿಗೆ ಮತ ಹೋಗುತ್ತವೆ ಎಂದು ಪ್ರಶ್ನೆ ಮಾಡಿದ್ದಾರೆ. 

ಚುನಾವಣೆಗಾಗಿ ಇವಿಎಂ ಸಂಶೋಧಿಸಿದ ಜಪಾನ್ ದೇಶದಲ್ಲೇ ಇವಿಎಂ ಬಳಕೆ ಮಾಡುವುದಿಲ್ಲ. ಅವರಿಗೆ ತಾವೇ ಕಂಡು ಹಿಡಿದ ಯಂತ್ರದ ಮೇಲೆ ನಂಬಿಕೆ ಇಲ್ಲ. ಆದರೆ ನಮ್ಮಲ್ಲಿ ಇವಿಎಂ ಬಳಸಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು. 

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಇವಿಎಂ ಬಗ್ಗೆ ತನಿಖೆ ನಡೆಸಬೇಕು ಎಂದು ಸುರೇಶ್ ಗೌಡ ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..