ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡುವಂತೆ ಕೇಜ್ರಿವಾಲ್'ಗೆ ಅಮಿತ್ ಶಾ ಕರೆ

Published : May 02, 2017, 10:58 AM ISTUpdated : Apr 11, 2018, 12:49 PM IST
ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡುವಂತೆ ಕೇಜ್ರಿವಾಲ್'ಗೆ ಅಮಿತ್ ಶಾ ಕರೆ

ಸಾರಾಂಶ

ಎವಿಎಂಗಳ ಕಾರ್ಯಕ್ಷಮತೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್'ಗೆ ಇರುವ ಸಂಶಯಗಳನ್ನು ಬಗೆಹರಿಸಿಕೊಳ್ಳಲು ಬಿಜೆಪಿ ಮತಗಟ್ಟೆಗಳ ಉಸ್ತುವಾರಿ ಅಧಿಕಾರಿಗಳನ್ನು ಭೇಟಿ ಮಾಡಲು ಅಮಿತ್ ಶಾ ಕೇಜ್ರಿವಾಲ್'ಗೆ ಕರೆ ನೀಡಿದ್ದಾರೆ.

ನವದೆಹಲಿ (ಮೇ.02): ಎವಿಎಂಗಳ ಕಾರ್ಯಕ್ಷಮತೆ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್'ಗೆ ಇರುವ ಸಂಶಯಗಳನ್ನು ಬಗೆಹರಿಸಿಕೊಳ್ಳಲು ಬಿಜೆಪಿ ಮತಗಟ್ಟೆಗಳ ಉಸ್ತುವಾರಿ ಅಧಿಕಾರಿಗಳನ್ನು ಭೇಟಿ ಮಾಡಲು ಅಮಿತ್ ಶಾ ಕೇಜ್ರಿವಾಲ್'ಗೆ ಕರೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತನಾಡುತ್ತಾ, ನಮ್ಮ ಗೆಲುವಿಗೆ ಇವಿಎಂ ಕಾರಣವೆಂದು ಕೇಜ್ರಿವಾಲ್ ದೂಷಿಸುತ್ತಾರೆ. ನಮ್ಮ ಮತಗಟ್ಟೆ ಉಸ್ತುವಾರಿ ಅಧಿಕಾರಿಗಳನ್ನು ಭೇಟಿ ಮಾಡಿ ನಿಜವಾದ ಕಾರಣಗಳನ್ನು ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ.

ದೆಹಲಿ ಮಹಾನಗರ ಪಾಲಿಕೆಯ ಗೆಲುವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿಯೇ ಸರ್ಕಾರ ರಚಿಸಲು ಇದೊಂದು ವೇದಿಕೆ ಎಂದಿದ್ದಾರೆ. ಡಿಜಿಟಲ್ ಇಂಡಿಯಾದ ಮೂಲಕ ಬಿಜೆಪಿ ಯುವಕರ ಕೌಶಲ್ಯವನ್ನು ಹೆಚ್ಚಿಸಿದೆ. ಅದೇ ರೀತಿ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಗಳನ್ನು ಪೂರೈಸುವುದರ ಮೂಲಕ ಉತ್ತೇಜನ ನೀಡಿದೆ ಎಂದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NIMHANS MindNote app: ಮಾನಸಿಕ ಆರೋಗ್ಯಕ್ಕೆ ನಿಮ್ಹಾನ್ಸ್ ಮೈಂಡ್‌ ನೋಟ್‌ ಆ್ಯಪ್: ಈಗ ಕನ್ನಡದಲ್ಲಿ!
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ