ಸರ್ಜಿಕಲ್ ಸ್ಟ್ರೈಕ್ ಅತಿಯಾದ ಪ್ರಚಾರ: ನಿವೃತ್ತ ಸೇನಾಧಿಕಾರಿ!

Published : Dec 08, 2018, 02:56 PM ISTUpdated : Dec 08, 2018, 03:53 PM IST
ಸರ್ಜಿಕಲ್ ಸ್ಟ್ರೈಕ್ ಅತಿಯಾದ ಪ್ರಚಾರ: ನಿವೃತ್ತ ಸೇನಾಧಿಕಾರಿ!

ಸಾರಾಂಶ

‘ಸರ್ಜಿಕಲ್ ಸ್ಟ್ರೈಕ್ ಗೆ ಅತಿಯಾದ ಪ್ರಚಾರ ನೀಡಲಾಗಿದೆ’| ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ ಅಸಮಾಧಾನ| ಸೈನಿಕರ ಧೀರ ಹೋರಾಟ ರಾಜಕೀಯ ಲಾಭಕ್ಕಾಗಿ ಬಳಕೆ| ಸರ್ಜಿಕಲ್ ಸ್ಟ್ರೈಕ್ ರಾಜಕೀಯ ಲಾಭಕ್ಕಾಗಿ ಬಳಕೆಯಾಗುತ್ತಿರುವುದು ಖೇದಕರ| ಅಗತ್ಯ ಬಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಸೇನೆ ಸನ್ನದ್ಧ

ಚಂಡೀಗಢ(ಡಿ.08): ಪಾಕ್ ನೆಲದಲ್ಲಿ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರ ಅಗತ್ಯವಿರಲಿಲ್ಲ ಎಂದು ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಉಗ್ರರ ನೆಲೆಗಳ ಮೇಲೆ 2016ರಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಆದರೆ ಇದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ನಿಜಕ್ಕೂ ಖೇದಕರ ಸಂಗತಿ ಎಂದು ಡಿ.ಎಸ್.ಹೂಡಾ ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ನಡೆದ ಸೇನಾ ಸಾಹಿತ್ಯ ಉತ್ಸವ 2018ರಲ್ಲಿ ಮಾತನಾಡಿದ ಹೂಡಾ, ಸೇನೆ ನಡೆಸಿದ್ದ ಸೀಮಿತ ದಾಳಿ ಬಗ್ಗೆ ಅತಿಯಾದ ಪ್ರಚಾರ ನಡೆಸಲಾಯಿತು ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ.

ಸೇನಾ ಕಾರ್ಯಾಚರಣೆ ಅತ್ಯಂತ ಮುಖ್ಯವಾದದ್ದು. ಆದರೆ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸೇನೆಗೆ ಮಾಡಿದ ಅಪಮಾನ ಎಣದು ಹೂಡಾ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

 ಈಗಲೂ ಅಗತ್ಯ ಬಿದ್ದರೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಲು ಭಾರತೀಯ ಸೇನೆ ಸಜ್ಜಾಗಿದೆ. ಆದರೆ ಅವರ ಧೀರ ಹೋರಾಟವನ್ನು ಮತ್ತೆ ರಾಜಕೀಯ ನಾಯಕರು ತಮ್ಮ ಲಾಭಕ್ಕಾಗಿ ಬಳಸಿಕೊಂಡರೆ ದು ನಿಜಕ್ಕೂ ಖೇದಕರ ಎಂದು ಡಿ.ಎಸ್.ಹೂಡಾ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ