
ಮುಂಬೈ (ಜೂ.17): ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಸಚಿವ ಸಂಪುಟ ಭಾನುವಾರ ವಿಸ್ತರಣೆಯಾಗಿದೆ.
ಕ್ಯಾಬಿನೆಟ್ ಸಚಿವರಾಗಿ ರಾಧಾಕೃಷ್ಣ ವಿಖೆ ಪಾಟೀಲ್, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲ್ಲರ್ ಸೇರಿದಂತೆ 3 ಜನರು ಅಧಿಕಾರ ಸ್ವೀಕರಿಸಿದರು. ವಿಪಕ್ಷ ನಾಯಕರಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್ ಕಾಂಗ್ರೆಸ್ ತ್ಯಜಿಸಿ ಇತ್ತೀಚಿಗೆ ಬಿಜೆಪಿ ಸೇರ್ಪಡೆಯಾಗಿದ್ದರು.
ಇವರ ಜತೆಗೆ 5 ಜನ ಸಹಾಯಕ ಸಚಿವರು ಸೇರಿದಂತೆ ಎಂಟು ಜನರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರದಿಂದ ಫಡ್ನವೀಸ್ ಸರ್ಕಾರದ ಅಧಿವೇಶನ ಸಹ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕೈಗೊಳ್ಳಲಾಗಿದೆ. ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿ ಕೇವಲ 4 ತಿಂಗಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.