ಕಾಂಗ್ರೆಸ್ ತೊರೆದ ನಾಯಕಗೆ ಸಿಕ್ತು ಸಚಿವ ಸ್ಥಾನ

Published : Jun 17, 2019, 11:24 AM ISTUpdated : Jun 17, 2019, 11:28 AM IST
ಕಾಂಗ್ರೆಸ್ ತೊರೆದ ನಾಯಕಗೆ ಸಿಕ್ತು ಸಚಿವ ಸ್ಥಾನ

ಸಾರಾಂಶ

ಕಾಂಗ್ರೆಸ್ ತೊರೆದು ಪಕ್ಷಾಂತರ ಮಾಡಿದ್ದ ಮುಖಂಡನೋರ್ವಗೆ ಇದೀಗ ಸಚಿವ ಸ್ಥಾನ ದೊರಕಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಮುಂಬೈ (ಜೂ.17): ದೇವೇಂದ್ರ ಫಡ್ನವೀಸ್‌ ನೇತೃತ್ವದ ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಸಚಿವ ಸಂಪುಟ ಭಾನುವಾರ ವಿಸ್ತರಣೆಯಾಗಿದೆ. 

ಕ್ಯಾಬಿನೆಟ್‌ ಸಚಿವರಾಗಿ ರಾಧಾಕೃಷ್ಣ ವಿಖೆ ಪಾಟೀಲ್‌, ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್‌ ಶೆಲ್ಲರ್‌ ಸೇರಿದಂತೆ 3 ಜನರು ಅಧಿಕಾರ ಸ್ವೀಕರಿಸಿದರು. ವಿಪಕ್ಷ ನಾಯಕರಾಗಿದ್ದ ರಾಧಾಕೃಷ್ಣ ವಿಖೆ ಪಾಟೀಲ್‌ ಕಾಂಗ್ರೆಸ್‌ ತ್ಯಜಿಸಿ ಇತ್ತೀಚಿಗೆ ಬಿಜೆಪಿ ಸೇರ್ಪಡೆಯಾಗಿದ್ದರು. 

ಇವರ ಜತೆಗೆ 5 ಜನ ಸಹಾಯಕ ಸಚಿವರು ಸೇರಿದಂತೆ ಎಂಟು ಜನರು ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರದಿಂದ ಫಡ್ನವೀಸ್‌ ಸರ್ಕಾರದ ಅಧಿವೇಶನ ಸಹ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಕೈಗೊಳ್ಳಲಾಗಿದೆ. ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿ ಕೇವಲ 4 ತಿಂಗಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು