ನಿವೃತ್ತ ಡಿಐಜಿ ರಮೇಶ್‌ ಬಿಜೆಪಿ ಸೇರ್ಪ​ಡೆ

Published : Sep 28, 2016, 02:38 PM ISTUpdated : Apr 11, 2018, 12:44 PM IST
ನಿವೃತ್ತ ಡಿಐಜಿ ರಮೇಶ್‌ ಬಿಜೆಪಿ ಸೇರ್ಪ​ಡೆ

ಸಾರಾಂಶ

ಹೊಸದುರ್ಗ: ಬಿಜೆಪಿ ರಾಷ್ಟ್ರೀಯ ತತ್ವ ಸಿದ್ಧಾಂತಗಳನ್ನು ಒಪ್ಪಿ ಬಿ.ಜೆ.ಪಿ.ಯನ್ನು ಸೇರಿರುವುದಾಗಿ ನಿವೃತ್ತ ಡಿಐಜಿ ಜಿ.ರಮೇಶ್‌ ಹೇಳಿದರು.

ಪಟ್ಟಣದ ಬಿ.ಜೆ.ಪಿ. ಕಚೇರಿಯಲ್ಲಿ ಮಂಗಳವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಅವ​ರು, 30 ವರ್ಷ ಸರ್ಕಾರಿ ಸೇವೆಯಲ್ಲಿದ್ದು, ಸಾರ್ವಜನಿಕರ ಸೇವೆ ಸಲ್ಲಿಸ​ಲಾ​ಗಿದೆ. ನಿವೃತ್ತಿ ನಂತರವೂ ಸಾರ್ವಜನಿಕರ ಸೇವೆ ಮಾಡುವ ಸದುದ್ದೇಶದಿಂದ ರಾಜಕೀಯಕ್ಕೆ ಬಂದಿದ್ದು, ಪಕ್ಷ ನೀಡುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವ​ಹಿ​ಸುವುದಾ​ಗಿ ತಿಳಿಸಿದರು.

ದೇವಾಂಗ ಸಮಾಜದ ರಾಜ್ಯಾಧ್ಯಕ್ಷರಾದ ಮೇಲೆ ರಾಜ್ಯದ ಉದ್ದಗಲಕ್ಕೂ ಸುತ್ತುವ ಮೂಲಕ ಜನರ ಸಮಸ್ಯೆಗಳ ಬಗ್ಗೆ ಅರಿವು ಪಡೆ​ಯ​ಲಾ​ಗಿದೆ. ಪಕ್ಷದ ಸಿದ್ಧಾಂತ ಚೌಕಟ್ಟಿನಲ್ಲಿ ಬಡವರು, ದೀನ ದಲಿತರ ಉದ್ಧಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸಲಾಗು​ವುದು. ಮುಂದಿನ ಚುನಾವಣೆಯಲ್ಲಿ ಹೊಸದುರ್ಗ ತಾಲೂಕಿನಲ್ಲಿ ಬಿಜೆಪಿ ಸರ್ಕಾರದ ಶಾಸಕರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇ​ಕಿದೆ. ತಾಲೂಕಿನ ಮುಖಂಡರಲ್ಲಿನ ಸಣ್ಣ ಪುಟ್ಟಭಿನ್ನಾಭಿಪ್ರಾಯವನ್ನು ಬಗೆಹರಿಸುವ ಮೂಲಕ ಎಲ್ಲ ಹಂತದ ಮುಖಂಡರ ಸಲಹೆ, ಸಹಕಾರ ಪಡೆದು ಪಕ್ಷ ಸಂಘಟನೆಗೆ ಶ್ರಮಿಸಲಾಗು​ವುದು ಎಂದ​ರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ