ಮಹೇಶ್‌ರಿಂದಲೇ ರಾಜೀನಾಮೆ ಅಸಲಿ ಕಾರಣ ಬಹಿರಂಗ

Published : Oct 13, 2018, 08:25 PM IST
ಮಹೇಶ್‌ರಿಂದಲೇ ರಾಜೀನಾಮೆ ಅಸಲಿ ಕಾರಣ ಬಹಿರಂಗ

ಸಾರಾಂಶ

ರಾಜೀನಾಮೆ ನೀಡಿದ ಬಳಿಕ ಕ್ಷೇತ್ರಕ್ಕೆ ತೆರಳಿದ ಎನ್.ಮಹೇಶ್ ರಾಜೀನಾಮೆ ಕಾರಣ ಮತ್ತು ವಿವರಣೆ ನೀಡಿದ್ದಾರೆ. ಮಾತನಾಡುತ್ತ ಭಾವುಕರಾಗಿದ್ದಾರೆ.

ಚಾಮರಾಜನಗರ[ಅ.13]  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸ್ವ ಕ್ಷೇತ್ರಕ್ಕೆ ಎನ್.ಮಹೇಶ್ ಮರಳಿದ್ದು ಅವರಿಗೆ ಅದ್ದೂರಿ ಸ್ವಾಗತವೂ ಸಿಕ್ಕಿದೆ. ಬಿಎಸ್ ಪಿ ಶಾಸಕರಗಿರುವ ಮಹೇಶ್ ಸಮ್ಮಿಶ್ರ ಸರಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು.

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಬಳಿ ಕಾರ್ಯಕರ್ತರಿಂದ ಅದ್ದೂರಿ ಸ್ವಾಗ ಸಿಕ್ಕಿತು. ಪಕ್ಷ ಸಂಘಟನೆ ದೃಷ್ಟಿಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಿಕ್ಷಣ ಖಾತೆ ನಿಭಾಯಿಸುವುದು ಅಷ್ಟು ಸುಲಭವಾಗಿರಲಿಲ್ಲ. ದಿನದ 24 ಗಂಟೆ ಕಾರ್ಯ ನಿರ್ವಹಿಸಿದಾಗ ಮಾತ್ರ ಉತ್ತಮವಾಗಿ ಕೆಲಸ ಮಾಡಲು ಸಾಧ್ಯ. ಶಿಕ್ಷಣ ಖಾತೆಯಂತಹ ದೊಡ್ಡ ಖಾತೆ ಜವಾಬ್ದಾರಿಯನ್ನು ನನಗೆ ನೀಡಿದ್ದರಿಂದ ಕ್ಷೇತ್ರದ ಕಡೆ ಗಮನ ಹರಿಸಲಾಗುತ್ತಿರಲಿಲ್ಲ ಎಂದು ಕಾರಣ ನೀಡಿದರು.

ನನಗೆ ಅಧಿಕಾರಕ್ಕಿಂತ ಪಕ್ಷ ಮುಖ್ಯ, ನಾನು ಕೂಡ ಸಮಿಶ್ರ ಸರಕಾರದಲ್ಲಿ  ಪಾಲುದಾರ. ಮುಂದಿನ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಮಾತ್ರ ಪ್ರಚಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದಿಲ್ಲ. ಕಾಂಗ್ರೆಸ್ ವಿರುದ್ದ ನಾವು ಹೋರಾಟ ಮಾಡಿಕೊಂಡು ಬಂದಿದ್ದೇವೆ, ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು