
ಸವದತ್ತಿ(ಅ.5): ಮಾಜಿ ಶಾಸಕ ವಿಶ್ವನಾಥ(ರಾಜಣ್ಣ) ಮಾಮನಿ ಇಂದು ವಿಧಿವಶರಾಗಿದ್ದಾರೆ. ಅನ್ನನಾಳದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ವಿಶ್ವನಾಥ್ ಮಾಮನಿ ಹುಬ್ಬಳ್ಳಿಯಲ್ಲಿ ಇಂದು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
2004 ರಲ್ಲಿ ಸವದತ್ತಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ವಿಶ್ವನಾಥ್, ತಮ್ಮ ಸೌಮ್ಯ ಸ್ವಭಾವದಿಂದಲೇ ಜನರ ಮನ ಗೆದ್ದವರು. ಸವದತ್ತಿ ಪುರಸಭೆಯ ಸದಸ್ಯರಾಗಿಯೂ ವಿಶ್ವನಾಥ್ ಸೇವೆ ಸಲ್ಲಿಸಿದ್ದರು.
ವಿಶ್ವನಾಥ ಅವರ ಫುತ್ರ ಮಲ್ಲಿಕಾರ್ಜುನ ಅವರು 2015 ರಲ್ಲಿ ಇಂಡಿಯನ್ ರೆವಿನ್ಯೂ ಸರ್ವಿಸ್ (ಐಆರ್ ಎಸ್) ಹುದ್ದೆಗೆ ಆಯ್ಕೆಯಾಗಿದ್ದು ಸದ್ಯ ಮುಂಬಯಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ಪುತ್ರಿಯೊಬ್ಬಳು ವಿದೇಶದಲ್ಲಿ ಡೆಂಟಲ್ ವೈದ್ಯರಾಗಿದ್ದಾರೆ.
ಇನ್ನು ವಿಶ್ವನಾಥ್ ಮಾಮನಿ ಅವರ ಅಂತ್ಯಕ್ರಿಯೆ ಇಂದು ಸಂಜೆ 6 ಗಂಟೆಗೆ ಸವದತ್ತಿಯಲ್ಲಿ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.