ಭಾಸ್ಕರ್ ರಾವ್'ಗೆ ಮಧ್ಯಂತರ ಜಾಮೀನು; ಶೂರಿಟಿ ನೀಡಿದ ಮನೆಗೆಲಸದಾಕೆ

Published : Nov 28, 2016, 11:01 AM ISTUpdated : Apr 11, 2018, 12:42 PM IST
ಭಾಸ್ಕರ್ ರಾವ್'ಗೆ ಮಧ್ಯಂತರ ಜಾಮೀನು; ಶೂರಿಟಿ ನೀಡಿದ ಮನೆಗೆಲಸದಾಕೆ

ಸಾರಾಂಶ

ಭಾಸ್ಕರ್ ರಾವ್ ಅವರ ಮನೆಯ ಕೆಲಸದಾಕೆ ಹೆಲೆನ್ ಎಂಬುವವರು ಕೋರ್ಟ್ ಸೂಚನೆ ಮೇರೆಗೆ ಒಂದು ಲಕ್ಷ ರೂಪಾಯಿ ಬಾಂಡ್ ಶೂರಿಟಿ ನೀಡಿ ಜಾಮೀನು ಕೊಟ್ಟಿದ್ದಾರೆ.

ಬೆಂಗಳೂರು(ನ. 28): ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಸಿಲುಕಿರುವ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ನ. 30ರಂದು ಭಾಸ್ಕರ್ ರಾವ್ ಅವರ ತಾಯಿಯ ಪುಣ್ಯ ತಿಥಿ ಇರುವ ಹಿನ್ನೆಲೆಯಲ್ಲಿ ಅವರಿಗೆ ಲೋಕಾಯುಕ್ತ ಕೋರ್ಟ್'ನಲ್ಲಿ ಜಾಮೀನು ಮಂಜೂರಾಗಿದೆ. ಭಾಸ್ಕರ್ ರಾವ್ ಅವರ ಮನೆಯ ಕೆಲಸದಾಕೆ ಹೆಲೆನ್ ಎಂಬುವವರು ಕೋರ್ಟ್ ಸೂಚನೆ ಮೇರೆಗೆ ಒಂದು ಲಕ್ಷ ರೂಪಾಯಿ ಬಾಂಡ್ ಶೂರಿಟಿ ನೀಡಿ ಜಾಮೀನು ಕೊಟ್ಟಿದ್ದಾರೆ.

ಲೋಕಾಯುಕ್ತ ಕಚೇರಿಯಲ್ಲಿ ಡೀಲ್'ಗಳು ನಡೆಯುತ್ತಿದ್ದ ಆರೋಪದೊಂದಿಗೆ ನ್ಯಾ| ಭಾಸ್ಕರ ರಾವ್ ವಿರುದ್ಧ ಲೋಕಾಯುಕ್ತ ಕೋರ್ಟ್'ನಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ತನಿಖಾ ತಂಡ(ಎಸ್'ಐಟಿ) ಈ ಪ್ರಕರಣದಲ್ಲಿ ಚಾರ್ಜ್'ಶೀಟ್ ಕೂಡ ಸಲ್ಲಿಸಿದೆ. ಆದರೆ, ತನ್ನ ವಿರುದ್ಧ ಸಲ್ಲಿಸಿರುವ ಚಾರ್ಜ್'ಶೀಟನ್ನು ರದ್ದು ಮಾಡಿ ತನ್ನನ್ನು ಆರೋಪಿ ಸ್ಥಾನದಿಂದ ತೆಗೆಯಬೇಕೆಂದು ಭಾಸ್ಕರ್ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ತಮ್ಮ ಜೀವಿತಾವಧಿಯಲ್ಲಿ ಮೊದಲ ಬಾರಿಗೆ ಇಂದು ಕೋರ್ಟ್ ಕಟಕಟೆ ಏರಬೇಕಾಯಿತು.

ಭ್ರಷ್ಟರ ಬೇಟೆಯಾಡುವ ಲೋಕಾಯುಕ್ತ ಸಂಸ್ಥೆಯ ಮುಖ್ಯಸ್ಥರಾಗಿದ್ದ ನ್ಯಾ| ಭಾಸ್ಕರ್ ರಾವ್ ಅವರೇ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವುದು ವಿಪರ್ಯಾಸವೇ ಸರಿ ಎನ್ನುವಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡ್ರಗ್ಸ್‌ ಕಾರ್‍ಯಾಚರಣೆಯಲ್ಲಿ ರಾಜ್ಯ ಪೊಲೀಸರೂ ಭಾಗಿ : ಡಾ। ಪರಂ
ಕೈ - ಬಿಜೆಪಿ ಬುಲ್ಡೋಜರ್‌ ಜಟಾಪಟಿ