
ತೂತ್ತುಕುಡಿ[ಆ.04]: ಯಾವುದೇ ಪೂರ್ವ ಮಾಹಿತಿ ನೀಡದೆ ಜಲ ಮಾರ್ಗವಾಗಿ ಗುರುವಾರ ಭಾರತಕ್ಕೆ ಬಂದಿದ್ದ, ಮಾಲ್ಡೀವ್ಸ್ನ ಮಾಜಿ ಉಪಾಧ್ಯಕ್ಷ ಅಹ್ಮದ್ ಅದೀಬ್ ಅಬ್ದುಲ್ ಗಫೂರ್ನನ್ನು ಭಾರತ ಮರಳಿ ಕಳುಹಿಸಿದೆ. ಅವರು ರಾಜಕೀಯ ಆಶ್ರಯ ಕೋರಿ ಭಾರತಕ್ಕೆ ಬಂದಿದ್ದರು, ಆದರೆ ಅವರ ಮನವಿಯನ್ನು ತಿರಸ್ಕರಿಸಿ ಮರಳಿ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ದಾಖಲೆಗಳು ಇಲ್ಲದೆ ಒಂಭತ್ತು ಸಿಬ್ಬಂದಿಗಳೊಂದಿಗೆ ಸರಕು ಹಡಗಿನಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶ ಮಾಡಿದ್ದ ಅದೀಬ್ರನ್ನು ಹಡಗಿನಿಂದ ಇಳಿಯಲು ಅವಕಾಶ ಕೊಡದೇ ವಿಚಾರಣೆ ನಡೆಸಲಾಗಿತ್ತು. ವಿವಿಧ ಕೇಂದ್ರ ತನಿಖಾ ಸಂಸ್ಥೆಗಳೂ ಅದೀಬ್ರನ್ನು ತೀವ್ರ ವಿಚಾರಣೆಗೆ ಗುರಿಪಡಿಸಿತ್ತು.
ಅದೀಬ್ರನ್ನು ಅದೇ ಹಡಗಿನಲ್ಲಿ ಅವರನ್ನು ಹಿಂದುರುಗಿಸಲಾಗಿದ್ದು, ಶುಕ್ರವಾರ ಮಧ್ಯರಾತ್ರಿ ಅವರು ತೂತ್ತುಕುಡಿಯಿಂದ ಮಾಲ್ಡೀವ್ಸ್ಗೆ ಪ್ರಯಾಣ ಬೆಳೆಸಿದ್ದಾರೆ. ಕರಾವಳಿ ರಕ್ಷಣಾ ಪಡೆಗಳು ಭಾರತೀಯ ಜಲಸೀಮೆ ದಾಟುವವರೆಗೆ ನಿಗಾ ವಹಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅದೀಬ್ಗೆ ಮಾಲ್ಡೀವ್್ಸನಲ್ಲಿ ಜೀವಬೆದರಿಕೆ ಇರುವುದರಿಂದ ರಾಜಕೀಯ ಆಶ್ರಯ ಕೋರಿ ಭಾರತಕ್ಕೆ ಬಂದಿದ್ದರು ಎಂದು ಅದೀಬ್ ಪರ ವಕೀಲ ಹೇಳಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.