
ನವದೆಹಲಿ[ಆ.20]: ಕಳೆದ ಲೋಕಸಭೆಯ ಅವಧಿ ಮುಗಿದರೂ ಇನ್ನೂ ದೆಹಲಿಯ ಸರ್ಕಾರಿ ಬಂಗಲೆಗಳಲ್ಲಿ ವಾಸವಿದ್ದ 200ಕ್ಕೂ ಹೆಚ್ಚು ಸಂಸದರಿಗೆ ವಾರದೊಳಗೆ ಮನೆ ಖಾಲಿ ಮಾಡುವಂತೆ ಸಂಸದೀಯ ಸಮಿತಿಯೊಂದು ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಇಂಥ ಮನೆಗಳಿಗೆ ಇನ್ನು ಮೂರು ದಿನಗಳಲ್ಲಿ ನೀರು, ವಿದ್ಯುತ್ ಮತ್ತು ಅಡುಗೆ ಅನಿಲ ಪೂರೈಕೆಯನ್ನೂ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಹೀಗಾಗಿ ದಿಲ್ಲಿಯ ಐಷಾರಾಮಿ ಲ್ಯೂಟನ್ಸ್ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ತಂಗಿದ್ದ ಮಾಜಿಗಳು ಇದೀಗ ಅನಿವಾರ್ಯವಾಗಿ ಮನೆ ಖಾಲಿ ಮಾಡಬೇಕಾಗಿ ಬಂದಿದೆ.
ದಿಲ್ಲಿ ಸರ್ಕಾರಿ ಬಂಗ್ಲೆ ಬಿಡದ 200 ಮಾಜಿ ಸಂಸದರು!
ಮಾಜಿ ಲೋಕಸಭಾ ಸದಸ್ಯರು ಲೋಕಸಭೆ ವಿಸರ್ಜನೆಯಾದ 1 ತಿಂಗಳ ಅವಧಿಯಲ್ಲಿ ತಮಗೆ ನೀಡಲಾದ ಸರ್ಕಾರಿ ಬಂಗಲೆ ಖಾಲಿ ಮಾಡಬೇಕೆಂಬ ನಿಯಮವಿದೆ. ಆದರೆ, 16ನೇ ಲೋಕಸಭೆ ವಿಸರ್ಜನೆಯಾಗಿ 3 ತಿಂಗಳು ಕಳೆದರೂ, 2014ರಲ್ಲಿ ಸರ್ಕಾರ ನೀಡಿದ್ದ ಅಧಿಕೃತ ಬಂಗಲೆಗಳನ್ನು 200ಕ್ಕೂ ಹೆಚ್ಚು ಮಾಜಿ ಸಂಸದರು ಖಾಲಿ ಮಾಡದೆ, ಅಲ್ಲೇ ಠಿಕಾಣಿ ಹೂಡಿದ್ದಾರೆ. ಇದರಿಂದಾಗಿ ಲೋಕಸಭೆಗೆ ಆಯ್ಕೆಯಾದ ನೂತನ ಸಂಸದರಿಗೆ ಸರ್ಕಾರಿ ನಿವಾಸ ಕಲ್ಪಿಸುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.