ಕಾವೇರಿಗಾಗಿ ವಿಧಾನಸಭೆಯಲ್ಲಿ ಐತಿಹಾಸಿಕ ನಿರ್ಣಯ: ‘ಐತಿಹಾಸಿಕ’ ಐಡಿಯಾ ಕೊಟ್ಟಿದ್ದು ಗೌಡರು!

Published : Sep 24, 2016, 12:09 AM ISTUpdated : Apr 11, 2018, 12:38 PM IST
ಕಾವೇರಿಗಾಗಿ ವಿಧಾನಸಭೆಯಲ್ಲಿ ಐತಿಹಾಸಿಕ ನಿರ್ಣಯ: ‘ಐತಿಹಾಸಿಕ’ ಐಡಿಯಾ ಕೊಟ್ಟಿದ್ದು ಗೌಡರು!

ಸಾರಾಂಶ

ಕಾವೇರಿ ವಿವಾದ ಸದ್ಯಕ್ಕೆ ತಣ್ಣಗಾಗಿದೆ. ವಿಧಾನಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ತೆಗೆದುಕೊಂಡಿದೆ. ಸಿಎಂ ಸಿದ್ದರಾಮಯ್ಯರ ಈ ಜಾಣ ನಿರ್ಣಯಕ್ಕೆ ರಾಜ್ಯಾದ್ಯಂತ ಪ್ರಶಂಸೆ ವ್ಯಕ್ತವಾಗ್ತಿದೆ. ಆದರೆ, ಸಿದ್ದರಾಮಯ್ಯ ಈ ಐಡಿಯಾ ಹಿಂದೆ ಇರುವವರು ಮಾಜಿ ಪ್ರಧಾನಿ, ರಾಜಕೀಯ ಮುತ್ಸದ್ಧಿ ದೇವೇಗೌಡರು.

ತಮ್ಮ ಅಗಾಧವಾದ ರಾಜಕೀಯ ಅನುಭವದಿಂದ ರಾಜ್ಯಕ್ಕೆ ಅದ್ಭುತವಾದ ಸಲಹೆ ನೀಡಿ ಕಾವೇರಿ ನೀರು ಬಿಡದಂತೆ ಸೂಚಿಸಿ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ವಿಶೇಷ ಅಧಿವೇಶನ ಕರೆದು ಅಲ್ಲಿ ಸರ್ವಾನುಮತದಿಂದ ಕಾವೇರಿ ನೀರು ಬಿಡದಿರಲು ನಿರ್ಣಯ ಮಂಡನೆ ಮಾಡಿ ಅದನ್ನು ಅಂಗೀಕರಿಸುವ ಮೂಲಕ ಸೇಫ್​ ಗೇಮ್​ ಆಡಿದ್ದಲ್ಲದೇ, ನ್ಯಾಯಾಂಗ ನಿಂದನೆ ತಪ್ಪಿಸುವ ಒಂದು ಮಾಸ್ಟರ್​​ಸ್ಟ್ರೋಕ್​ ಎಂದು ಕಾನೂನು ಮತ್ತು ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

ವಿಧಾನಸಭೆಯಲ್ಲಿ ನಿರ್ಧಾರ ಮಂಡನೆ ಮಾಡುವುದರಿಂದ ಈ ನಿರ್ಣಯವನ್ನು ಕೋರ್ಟ್​ ಪ್ರಶ್ನಿಸುವಂತಿಲ್ಲ. ಈ ಸಲಹೆ ಕಾನೂನು ಪಂಡಿತರಿಗೂ ಹೊಳೆದಿರಲಿಲ್ಲ. ಸಿಎಂ ಸಿದ್ದರಾಮಯ್ಯ ದೇವೇಗೌಡರ ನಿವಾಸಕ್ಕೆ ಸಲಹೆ ಪಡೆಯಲು ಹೋಗಿದ್ದರು. ಈ ವೇಳೆ ರಾಜ್ಯದ ಪರ ವಕೀಲ ಮೋಹನ್​ ಕಾತರಕಿ ಅವರೂ ಇದ್ದರು. ಈ ವೇಳೆ ಹೇಳಿದ ಗೌಡರು, ಕೂಡಲೇ ಅಧಿವೇಶನ ಕರೆಯಿರಿ, ಅಧಿವೇಶನದಲ್ಲಿ ಕೈಗೊಂಡ ನಿರ್ಣಯವನ್ನು ಪ್ರಶ್ನಿಸುವಂತಿಲ್ಲ. ಕಲಾಪದಲ್ಲಿ ಮಂಡನೆಯಾದ ನಿರ್ಣಯವು ನ್ಯಾಯಾಂಗ ನಿಂದನೆ ಆಗುವುದಿಲ್ಲ ಅಂತ ಸಲಹೆ ಕೊಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ