ರೈತರ ಸಾಲ ಮನ್ನಾ ಭರವಸೆ : ಆರ್’ಬಿಐ ಗವರ್ನರ್ ಪತ್ರ

Published : Jan 06, 2018, 08:38 AM ISTUpdated : Apr 11, 2018, 12:48 PM IST
ರೈತರ ಸಾಲ ಮನ್ನಾ ಭರವಸೆ : ಆರ್’ಬಿಐ  ಗವರ್ನರ್ ಪತ್ರ

ಸಾರಾಂಶ

ರೈತರ ಸಾಲಮನ್ನಾ ಮಾಡಲಾಗುವುದು ಎಂದು ಚುನಾವಣೆ ವೇಳೆ ಭರವಸೆ ನೀಡಿದರೆ ಸಾಲ ಕಟ್ಟುವ ಸಾಮರ್ಥ್ಯ ಇರುವ ರೈತರು ಕೂಡ ಸಾಲ ಮರುಪಾವತಿ ನಿಲ್ಲಿಸುವ ಭೀತಿ ಇದೆ ಎಂದು ಹಿಂದಿನ ಆರ್‌ಬಿಐ ಗವರ್ನರ್ ಒಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು ಎಂದು ಲೋಕಸಭೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ (ಜ.06): ರೈತರ ಸಾಲಮನ್ನಾ ಮಾಡಲಾಗುವುದು ಎಂದು ಚುನಾವಣೆ ವೇಳೆ ಭರವಸೆ ನೀಡಿದರೆ ಸಾಲ ಕಟ್ಟುವ ಸಾಮರ್ಥ್ಯ ಇರುವ ರೈತರು ಕೂಡ ಸಾಲ ಮರುಪಾವತಿ ನಿಲ್ಲಿಸುವ ಭೀತಿ ಇದೆ ಎಂದು ಹಿಂದಿನ ಆರ್‌ಬಿಐ ಗವರ್ನರ್ ಒಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು ಎಂದು ಲೋಕಸಭೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಜೇಟ್ಲಿ, ‘ರೈತರ ಸಾಲ ಮನ್ನಾ ಭರವಸೆಯನ್ನು ಚುನಾವಣೆ ವೇಳೆ ರಾಜಕೀಯ ಪಕ್ಷಗಳು ನೀಡಿದರೆ ಅಪಾಯವಿದೆ.

ಇದರಿಂದ ಬ್ಯಾಂಕಿಂಗ್ ವಲಯಕ್ಕೆ ಹೊಡೆತ ಬೀಳಲಿದೆ. ಮರುಪಾವತಿ ಮಾಡುವ ಸಾಮರ್ಥ್ಯ ಹೊಂದಿದದವರೂ, ಸಾಲ ಮನ್ನಾ ಮಾಡಬಹುದು ಎಂಬ ನಿರೀಕ್ಷೆಯಿಂದ ಸಾಲ ಮರುಪಾವತಿಸದೇ ಸುಮ್ಮನಾಗುತ್ತಾರೆ ಎಂದು ಗವರ್ನರ್ ಪತ್ರ ಬರೆದಿದ್ದರು’ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು: ಎರಡೂ ಬಣಗಳಿಂದ ಘೋಷಣೆಗಳ ಸಮರ
ಪವಿತ್ರ ಶಕ್ತಿ ಮೇಲೆ ಬಿಜೆಪಿ, ಆರೆಸ್ಸೆಸ್‌ ದಾಳಿ: ಸಿಎಂ ಸಿದ್ದರಾಮಯ್ಯ ಕಿಡಿ