ಸಮಾನ ಹುದ್ದೆ-ಸಮಾನ ಪಿಂಚಣಿ ವಿಳಂಬ: ಮಾಜಿ ಯೋಧ ಆತ್ಮಹತ್ಯೆ

Published : Nov 02, 2016, 12:41 PM ISTUpdated : Apr 11, 2018, 01:09 PM IST
ಸಮಾನ ಹುದ್ದೆ-ಸಮಾನ ಪಿಂಚಣಿ ವಿಳಂಬ: ಮಾಜಿ ಯೋಧ ಆತ್ಮಹತ್ಯೆ

ಸಾರಾಂಶ

ಯೋಧನ ಕುಟುಂಬಸ್ಥರು, ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ ಹಾಗೂ ಆತ್ಮಹತ್ಯೆ  ಮಾಡಿಕೊಳ್ಳುವ ಮುಂಚೆ ಗ್ರೆವಾಲ್ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

ನವದೆಹಲಿ (ನ.02): ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ವಿಳಂಬದಿಂದ ಬೇಸತ್ತು ಮಾಜಿ ಯೋಧನೋರ್ವ ಆತ್ಮಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರಾಮ್ ಕಿಶನ್ ಗ್ರೆವಾಲ್, ಸೇನೆಯಿಂದ ನಿವೃತ್ತರಾಗಿದ್ದು,  ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದ ನೊಂದಿದ್ದರು ಎನ್ನಲಾಗಿದೆ.

ಗ್ರೆವಾಲ್ ಕುಟುಂಬಸ್ಥರು, ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ ಹಾಗೂ ಆತ್ಮಹತ್ಯೆ  ಮಾಡಿಕೊಳ್ಳುವ ಮುಂಚೆ ಗ್ರೆವಾಲ್ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು ಎನ್ನಲಾಗಿದೆ.

ರಾಹುಲ್ ಗಾಂಧಿ ಪೊಲೀಸರ ವಶಕ್ಕೆ:

ಮೃತ ಯೋಧನ ಕುಟುಂಬಸ್ಥರನ್ನು ಭೇಟಿಯಾಗಲು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಬಂದಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪೊಲೀಸರು  ಆಸ್ಪತ್ರೆ ಗೇಟ್’ನಲ್ಲೇ ತಡೆದು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ ರಾಮ್ ಕಿಶನ್ ಕುಟುಂಬಸ್ಥರನ್ನು ಭೇಟಿಯಾಗಲು ಬಂದಿದ್ದ ದೆಹಲಿ ಉಪ-ಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಅವರನ್ನು ಕೂಡಾ ದೆಹಲಿ ಪೊಲೀಸರು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್‌ಗೆ ಭಾರೀ ಕಾಮೆಂಟ್ಸ್‌!
ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; 'ಯಾರಿಗೆ ಬೇಕು ಈ ಲೋಕ'ವೆಂದು ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ!