ಪ್ರಧಾನಿ ವಿರುದ್ಧ ಸಂಸತ್ ನಿಂದನೆ ನೋಟಿಸ್ ಜಾರಿಗೆ ಚಿಂತನೆ :ಸೀತಾರಾಮ್ ಯೆಚೂರಿ

Published : Nov 22, 2016, 10:27 AM ISTUpdated : Apr 11, 2018, 01:07 PM IST
ಪ್ರಧಾನಿ ವಿರುದ್ಧ ಸಂಸತ್ ನಿಂದನೆ ನೋಟಿಸ್ ಜಾರಿಗೆ ಚಿಂತನೆ :ಸೀತಾರಾಮ್ ಯೆಚೂರಿ

ಸಾರಾಂಶ

ನೋಟು ನಿಷೇಧ ಗದ್ದಲ ಸಂಸತ್ ಅಧಿವೇಶನದ ನಾಲ್ಕನೇ ದಿನವೂ ಸದ್ದು ಮಾಡಿದ್ದು, ಸಂಸತ್ತಿಗೆ ಉತ್ತರ ಕೊಡಲು ನಿರಾಕರಿಸಿದ್ದಾರೆಂದು ಮೋದಿ ವಿರುದ್ಧ ಸಂಸತ್ ನಿಂದನೆ ನೋಟಿಸ್ ಜಾರಿಗೊಳಿಸಲು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಪ್ರತಿಪಕ್ಷವನ್ನು ಸಂಪರ್ಕಿಸಿದ್ದಾರೆ.

ನವದೆಹಲಿ (ನ.22): ನೋಟು ನಿಷೇಧ ಗದ್ದಲ ಸಂಸತ್ ಅಧಿವೇಶನದ ನಾಲ್ಕನೇ ದಿನವೂ ಸದ್ದು ಮಾಡಿದ್ದು, ಸಂಸತ್ತಿಗೆ ಉತ್ತರ ಕೊಡಲು ನಿರಾಕರಿಸಿದ್ದಾರೆಂದು ಮೋದಿ ವಿರುದ್ಧ ಸಂಸತ್ ನಿಂದನೆ ನೋಟಿಸ್ ಜಾರಿಗೊಳಿಸಲು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಪ್ರತಿಪಕ್ಷವನ್ನು ಸಂಪರ್ಕಿಸಿದ್ದಾರೆ.

ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. ನೋಟು ನಿಷೇಧ ಗದ್ದಲದಿಂದ ಕಲಾಪವು ಸರಿಯಾಗಿ ನಡೆಯುತ್ತಿಲ್ಲ. ನಾಲ್ಕನೇ ದಿನವಾದ ಇಂದು ಕೂಡಾ ಅಧಿವೇಶನ ನಡೆದಿಲ್ಲ. 

ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ ಚರ್ಚೆಯಲ್ಲಿ ಭಾಗವಹಿಸಿ ಪ್ರತಿಪಕ್ಷದವರ ಪ್ರಶ್ನೆಗೆ ಉತ್ತರಿಸಬೇಕು. ಆದರೆ ಇದುವರೆಗೂ ಅವರು ಸಂಸತ್ ಅಧಿವೇಶನದಲ್ಲಿ ಅವರು ಭಾಗವಹಿಸದೇ ಇರುವುದರಿಂದ ಕಲಾಪ ಸುಗಮವಾಗಿ ನಡೆಯುತ್ತಿಲ್ಲ. ಇದಕ್ಕೆ ಪ್ರಧಾನಿಯವರೇ ನೇರ ಹೊಣೆ ಎಂದು ಯೆಚೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ