ಶಶಿಕಲಾಗೆ ವಿಶೇಷ ಸವಲತ್ತು ಕಟ್!

Published : Jul 19, 2017, 10:02 AM ISTUpdated : Apr 11, 2018, 01:13 PM IST
ಶಶಿಕಲಾಗೆ ವಿಶೇಷ ಸವಲತ್ತು ಕಟ್!

ಸಾರಾಂಶ

ಹಲವು ಕರ್ಮಕಾಂಡಗಳಿಂದಾಗಿ ದೇಶದ ಗಮನ ಸೆಳೆದಿದ್ದ ಪರಪ್ಪನ ಆಗ್ರಹಾರ ಜೈಲಿನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾಗೆ ನೀಡಲಾಗಿದ್ದ ಹೆಚ್ಚುವರಿ ಸೌಲಭ್ಯಗಳನ್ನು ಹಿಂಪಡೆಯಲಾಗಿದೆ.

ಬೆಂಗಳೂರು(ಜು.19): ಹಲವು ಕರ್ಮಕಾಂಡಗಳಿಂದಾಗಿ ದೇಶದ ಗಮನ ಸೆಳೆದಿದ್ದ ಪರಪ್ಪನ ಆಗ್ರಹಾರ ಜೈಲಿನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾಗೆ ನೀಡಲಾಗಿದ್ದ ಹೆಚ್ಚುವರಿ ಸೌಲಭ್ಯಗಳನ್ನು ಹಿಂಪಡೆಯಲಾಗಿದೆ.

ಜೈಲಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಸೌಲಭ್ಯಗಳನ್ನು ನೀಡಿದ ಸುದ್ದಿ ದೇಶದಲ್ಲಿ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಜುಗರಕ್ಕೊಳಗಾದ ಹಿನ್ನೆಲೆಯಲ್ಲಿ ಶಶಿಕಲಾ ಅವರಿಗೆ ಸವಲತ್ತುಗಳನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಶಿಕಲಾ ಅವರಿಗೆ ನೀಡಲಾದ ವಿಶೇಷ ಸೌಲಭ್ಯಗಳನ್ನು ವಾಪಸ್ ಪಡೆಯಲಾಗಿದ್ದು, ಸಾಮಾನ್ಯ ಕೈದಿಯಂತೆ ನೋಡಲಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜೈಲಿನ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಿನ ಉಪಾಹಾರವನ್ನು ಜೈಲಿನ ಸಾಮಾನ್ಯ ಕೈದಿಗಳಿಗೆ ನೀಡುವಂತೆ ಶಶಿಕಲಾ ಅವರಿಗೆ ನೀಡಲಾಗುತ್ತಿದ್ದು, ಉಡುಪನ್ನು ಸಹ ಇತರೆ ಕೈದಿಗಳಂತೆ ಧರಿಸುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೆಹಲಿ ಭೇಟಿ ವೇಳೆ ಉಪಮುಖ್ಯಮಂತ್ರಿ ನಿಗೂಢ ಹೇಳಿಕೆ
ಹುಣಸೂರಿನಲ್ಲಿ ₹10 ಕೋಟಿ ಚಿನ್ನ ದೋಚಿದ್ದವರು ಬಿಹಾರದಲ್ಲಿ ಬಲೆಗೆ