ಲೋಕಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿಯಿಂದ ಭರ್ಜರಿ ದಾಖಲೆ

Published : Jan 07, 2019, 08:20 AM IST
ಲೋಕಸಭಾ ಚುನಾವಣೆ ಬೆನ್ನಲ್ಲೇ ಬಿಜೆಪಿಯಿಂದ ಭರ್ಜರಿ ದಾಖಲೆ

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಭಾರೀ ದಾಖಲೆಯೊಂದನ್ನು ಮಾಡಿದೆ. ದಲಿತ ಮತಗಳ ಮೇಲೆ ಕಣ್ಣಿರಿಸಿದ ಬಿಜೆಪಿ ಕಿಚಡಿ ತಂತ್ರದ ಮೊರೆ ಹೋಗಿತ್ತು.

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದಲಿತರ ಮತಗಳನ್ನು ಸೆಳೆವ ಉದ್ದೇಶದಿಂದ ಭಾನುವಾರ ಬಿಜೆಪಿ ‘ಕಿಚಡಿ’ ತಂತ್ರದ ಮೊರೆ ಹೋಯಿತು. ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ದಿಲ್ಲಿ ಬಿಜೆಪಿ ಘಟಕ ಆಯೋಜಿಸಿದ್ದ ‘ಭೀಮ ಮಹಾಸಂಗಮ’ ದಲಿತರ ರಾರ‍ಯಲಿಯಲ್ಲಿ 5 ಸಾವಿರ ಕೇಜಿ ತೂಕದ ‘ಸಾಮರತೆ ಕಿಚಡಿ’ ತಯಾರಿಸಿ, ಸಮಾವೇಶಕ್ಕೆ ಆಗಮಿಸಿದ್ದ ದಲಿತ ಕಾರ್ಯಕರ್ತರಿಗೆ, ಸಭಿಕರಿಗೆ ಉಣಬಡಿಸಲಾಯಿತು.

ವಿಶೇಷವೆಂದರ ದಲಿತರಿಂದ ಸಂಗ್ರಹಿಸಲಾದ ಅಕ್ಕಿ, ಬೇಳೆಕಾಳುಗಳನ್ನು ಬಳಸಿ ಬರೋಬ್ಬರಿ 5000 ಕೆ.ಜಿ. ತೂಕದ ಕಿಚಡಿ ತಯಾರಿಸಲಾಗಿತ್ತು ಎಂದು ಬಿಜೆಪಿ ಹೇಳಿಕೊಂಡಿದೆ. ಇದು ದಾಖಲೆ ನಿರ್ಮಿಸುವ ಉದ್ದೇಶವನ್ನೂ ಹೊಂದಿತ್ತು.

ಈ ಕಿಚಡಿ ತಯಾರಿಕೆಗೆ 400 ಕೇಜಿ ಅಕ್ಕಿ, 100 ಕೇಜಿ ಬೇಳೆ, 350 ಕೇಜಿ ತರಕಾರಿ, 1000 ಕೇಜಿ ದೇಸಿ ತುಪ್ಪ, 100 ಲೀ. ಎಣ್ಣೆ, 2500 ಲೀ. ನೀರು, 250 ಕೇಜಿ ಮಸಾಲೆ ಪದಾರ್ಥಗಳನ್ನು ಬಳಸಲಾಗಿದೆ ಎಂದು ಅಡುಗೆಭಟ್ಟರೊಬ್ಬರು ಹೇಳಿದ್ದಾರೆ. 2 ಲಕ್ಷ ದಲಿತರ ಮನೆಗಳಿಂದ ಈ ಪದಾರ್ಥಗಳನ್ನು ಬಿಜೆಪಿ ಕಾರ್ಯಕರ್ತರು ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ ನಾಗಪುರದಲ್ಲಿ ವಿಷ್ಣು ಮನೋಹರ ಎಂಬ ಬಾಣಸಿಗ 3 ಸಾವಿರ ಕೇಜಿ ಕಿಚಡಿ ತಯಾರಿಸಿದ್ದರು. ಈಗ ಬಿಜೆಪಿ ಕಾರ್ಯಕ್ರಮದಲ್ಲೂ ಇವರೇ ಮುಖ್ಯ ಅಡುಗೆ ಭಟ್ಟರಾಗಿ ಆಗಮಿಸಿ, ತಮ್ಮದೇ ದಾಖಲೆ ಮುರಿದಿದ್ದಾರೆ.

ಆದರೆ ದಲಿತರ ಈ ಸಮಾವೇಶಕ್ಕೆ ಬಿಜೆಪಿಯ ದಲಿತ ಸಂಸದ ಉದಿತ್‌ ರಾಜ್‌ ಗೈರು ಹಾಜರಾಗಿ ನಾನಾ ಊಹಾಪೋಹಕ್ಕೆ ಕಾರಣರಾದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ