ಅಂಬಿ ಸಾವಿನಲ್ಲೂ ವಿಕೃತಿ ಮೆರೆದ ಕಿರಾತಕರು

Published : Nov 26, 2018, 09:16 AM IST
ಅಂಬಿ ಸಾವಿನಲ್ಲೂ ವಿಕೃತಿ ಮೆರೆದ ಕಿರಾತಕರು

ಸಾರಾಂಶ

ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಅಗಲಿಕೆಯಿಂದ ರಾಜ್ಯವೇ ದುಃಖತಪ್ತವಾಗಿದೆ. ಇಂತಹ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು, ‘ದುಷ್ಟ ಸಂಹಾರ’ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅದರಲ್ಲಿ ಮೂವರು ಹಿರಿಯ ನಟರಿಗೆ ಕೀಳು ಮಟ್ಟದ ಭಾಷೆಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ದೂರು ದಾಖಲು ಮಾಡಲಾಗಿದೆ. 

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಮಹಾನ್ ನಟರ ಸಾವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ಸೈಬರ್ ಕ್ರೈಂ ಠಾಣೆಗಳಿಗೆ ಕೆಪಿಸಿಸಿ ಮಾನವ ಹಕ್ಕು ವಿಭಾಗವು ಭಾನುವಾರ ದೂರು ಸಲ್ಲಿಸಿದೆ. 

ಹಿರಿಯ ನಟ, ಮಾಜಿ ಸಚಿವ ಅಂಬರೀಷ್ ಅಗಲಿಕೆಯಿಂದ ರಾಜ್ಯವೇ ದುಃಖತಪ್ತವಾಗಿದೆ. ಇಂತಹ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು, ‘ದುಷ್ಟ ಸಂಹಾರ’ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅದರಲ್ಲಿ ಮೂವರು ಹಿರಿಯ ನಟರಿಗೆ ಕೀಳು ಮಟ್ಟದ ಭಾಷೆಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. 

ಕೆಲ ಸಮಾಜಘಾತುಕ ಶಕ್ತಿಗಳು ಅನ್ಯ ವ್ಯಕ್ತಿಗಳ ಹೆಸರಲ್ಲಿ ಸಿಮ್‌ಗಳನ್ನು ಖರೀದಿಸಿ, ಆ ಸಂಖ್ಯೆಗಳ ನೆರವಿನಿಂದಲೇ ನಕಲಿ ಖಾತೆ ತೆರೆಯುತ್ತಾರೆ. ಯಾವುದಾ ದರೂ ಗಂಭೀರ ಘಟನೆಗಳ ಜರುಗಿದಾಗ ವಾಟ್ಸಾಪ್, ಫೇಸ್‌ಬುಕ್, ಟ್ವಿಟರ್‌ನಲ್ಲಿ ಪ್ರಚೋದನಾಕಾರಿ ಸಂದೇಶ ಗಳನ್ನು ಹರಿ ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. 

ಇಂತಹ ಶಕ್ತಿಗಳನ್ನು ಮಟ್ಟ ಹಾಕಬೇಕು. ದುಷ್ಟ ಸಂಹಾರ, ದೀಪಕ್ ದೇವಯ್ಯ, ಅರ್ಪಿತಾ ಭಟ್, ಅಬ್ದು ಲ್ಲಾ ಮಂಗಳೂರ್ ಎಂಬ ಖಾತೆಗಳಿಂದ ವಿಕೃತ ಪೋಸ್ಟ್ ಗಳು ಹರಿದಾಡಿವೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Video: ಶಾಪಿಂಗ್ ಮಾಲ್ ಒಳಗೆ ಕುದುರೆ ಸವಾರಿ! ಮುಂದೇನಾಯ್ತು ನೋಡಿ ಅಸಹ್ಯ, ಗಬ್ಬುನಾತ!
ಅಮೆರಿಕನ್ನರು ಈ 21 ದೇಶಗಳಿಗೆ ಹೋಗಲೇಬೇಡಿ ಎಂದ ಟ್ರಂಪ್ ಸರ್ಕಾರ, ಪಟ್ಟಿಯಲ್ಲಿ ಭಾರತ ಪಾಕಿಸ್ತಾನ ಸೇರಿವೆಯೇ?