Fact Check: ನಿತ್ಯಾನಂದನ ಪಾದಕ್ಕೆ ಎರಗಿದ ಗೃಹ ಸಚಿವ ಅಮಿತ್ ಶಾ

Published : Dec 10, 2019, 06:19 PM ISTUpdated : Dec 10, 2019, 06:23 PM IST
Fact Check: ನಿತ್ಯಾನಂದನ ಪಾದಕ್ಕೆ ಎರಗಿದ ಗೃಹ ಸಚಿವ ಅಮಿತ್ ಶಾ

ಸಾರಾಂಶ

ನಿತ್ಯಾನಂದನ ಕಾಲಿಗೆ ಗೃಹ ಸಚಿವ ಅಮಿತ್ ಶಾ ಎರಗಿದ್ರಾ?/ ವೈರಲ್ ಪೋಟೋದ ಹಿಂದಿನ ಅಸಲಿಯತ್ತೇನು/ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆದ ಪೋಟೋ

ಬೆಂಗಳೂರು(ಡಿ. 10)  ಅತ್ಯಾಚಾರ ಪ್ರಕರಣ ಎದುರಿಸುತ್ತ ದೇಶ ಬಿಟ್ಟು ಪರಾರಿಯಾಗಿರುವ ಸ್ವಾಮಿ ನಿತ್ಯಾನಂದನ ಕಾಲಿಗೆ ದೊಡ್ಡ ವ್ಯಕ್ತಿಯೊಬ್ಬರು ಎರಗುತ್ತಿರುವ ಪೋಟೋ ವೈರಲ್ ಆಗಿದೆ.

ಪೋಟೋದಲ್ಲಿ ವ್ಯಕ್ತಿಯ ಮುಖ ಸರಿಯಾಗಿ ಕಾಣುತ್ತಿಲ್ಲ. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಿತ್ಯಾನಂದನ ಕಾಲಿಗೆ ಎರಗುತ್ತಿದ್ದಾರೆ ಎಂದು ಸೋಶಿಯಲ್ ಮೀಡಿಯಾ ಹೇಳುತ್ತಿದೆ.

ಈ ಸುದ್ದಿಯನ್ನು ಬೆನ್ನು ಹತ್ತಿದ ಮಾಧ್ಯಮಗಳಿಗರೆ ಉತ್ತರವೂ ಸಿಕ್ಕಿದೆ.. ನಿತ್ಯಾನಂದ ಕಾಲಿಗೆ ಎರಗುತ್ತಿರುವುದು ಅಮಿತ್ ಶಾ ಅಲ್ಲ ಎಂಬುದು ಸ್ಪಷ್ಟವಾಗಿದೆ. ನಿತ್ಯಾನಂದನಿಗೆ ನಮಸ್ಕಾರ ಮಾಡುತ್ತಿರುವವರು ಮಾರಿಶಸ್ ನ ಹೈ ಕಮಿಶನರ್ ಜಗದೀಶ್ವರ ಗೋವರ್ಧನ್ ಎಂಬುದು ಸ್ಪಷ್ಟವಾಗಿದೆ.

ನಿತ್ಯಾನಂದನ ಹೊಸ ದೇಶ ಕೈಲಾಸದಲ್ಲಿ ಏನೆಲ್ಲ ವ್ಯವಸ್ಥೆಗಳಿವೆ?

ಫೆಸ್ ಬುಕ್ ನಲ್ಲಿ ಸಬೀರ್ ರಾಜನ್ ಮೌಕಲ್ ಎಂಬುವರು ಈ ಚಿತ್ರವನ್ನು ಶೇರ್ ಮಾಡಿಕೊಂಡು ಅಮಿತ್ ಶಾ ನಿತ್ಯಾನಂದನ ಕಾಲಿಗೆ ಬಿದ್ದಿದ್ದಾರೆ ಎಂದು ಬರೆದುಕೊಂಡ ನಂತರ ಪೋಟೋ ವೈರಲ್ ಆಗಿದೆ.

ತಮಿಳಿನಲ್ಲಿ ಇದನ್ನೇ ಶೇರ್ ಮಾಡಿಕೊಂಡ ಕೃಷ್ಣವೇಲ್ ಟಿಎಸ್ ಎಂಬುವರ ಪೋಸ್ಟ್ 2700 ಕ್ಕೂ ಅಧಿಕ ಸಾರಿ ಶೇರ್ ಆಗಿದೆ. ನಿತ್ಯಾನಂದ ದೇಶ ಬಿಟ್ಟು ಓಡಿಹೋಗಿದ್ದಾನೆ. ದ್ವೀಪವೊಂದನ್ನು ಖರೀದಿ ಮಾಡಿ ತನ್ನದೇ ಸ್ವಂತ ದೇಶ ನಿರ್ಮಾಣ ಮಾಡಿಕೊಂಡಿದ್ದಾನೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಸಂದರ್ಭ ಈ ಸುದ್ದಿ ಪ್ರಾಮುಖ್ಯ ಪಡೆದುಕೊಂಡಿದೆ.

ಇದು ಹೈದರಾಬಾದ್ ಎನ್ ಕೌಂಟರ್ ನ ನಿಜವಾದ ಪೋಟೋಗಳಾ?

ಇದು ಜುಲೈ 9, 2017ರಲ್ಲಿ ತೆಗೆದ ಚಿತ್ರ ಎನ್ನುವುದು ಗೊತ್ತಾಗಿದೆ.  ಬೆಂಗಳೂರಿನ ನಿತ್ಯಾನಂದ ಪೀಠದಲ್ಲಿ ನಡೆದ ಗುರುಪೂರ್ಣಿಮೆ ದಿನ ತೆಗೆದ ಪೋಟೋಕ್ಕೆ ಅಮಿತ್ ಶಾ ಹೆಸರು ಸೇರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಸ್ರೇಲ್ ಕೋಟೆಗೆ ಲಗ್ಗೆ ಇಟ್ಟ ಇರಾನ್‌ನ Dancing Missile; ಐರನ್ ಡೋಮ್ ಕಣ್ಣುತಪ್ಪಿಸಿ ನುಗ್ಗಿದ ಸೆಜ್ಜಿಲ್!
ಪಶ್ಚಿಮ ಬಂಗಾಳದ ಕದನ ಕಣ: ಸಿಎಂ ಮಮತಾ ಬ್ಯಾನರ್ಜಿ ಬತ್ತಳಿಕೆಯಲ್ಲಿರೋ ಅಸ್ತ್ರ ಯಾವುದು?