Fact Check: ಅಪಘಾತದಿಂದ ನಡುರಸ್ತೆಯಲ್ಲಿ ಒದ್ದಾಡುತ್ತಿದ್ದರೂ ಮಾನವೀಯತೆ ಮರೆತ್ರಾ ಜನ?

Published : Jul 04, 2019, 09:36 AM ISTUpdated : Jul 04, 2019, 11:08 AM IST
Fact Check: ಅಪಘಾತದಿಂದ ನಡುರಸ್ತೆಯಲ್ಲಿ ಒದ್ದಾಡುತ್ತಿದ್ದರೂ ಮಾನವೀಯತೆ ಮರೆತ್ರಾ ಜನ?

ಸಾರಾಂಶ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ನಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಆತನ ಸಹಾಯಕ್ಕೆ ಧಾವಿಸುವ ಬದಲು ಜನ ಆಂಬ್ಯುಲೆನ್ಸ್‌ಗಾಗಿ ಎದುರು ನೋಡಿದ ಘಟನೆ ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಮಾನವೀಯತೆ ಮರೆತ ಸಾರ್ವಜನಿಕರ ನಡವಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ನಿಜನಾ ಈ ಸುದ್ದಿ? 

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ನಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಆತನ ಸಹಾಯಕ್ಕೆ ಧಾವಿಸುವ ಬದಲು ಜನ ಆಂಬ್ಯುಲೆನ್ಸ್‌ಗಾಗಿ ಎದುರು ನೋಡಿದ ಘಟನೆ ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಮಾನವೀಯತೆ ಮರೆತ ಸಾರ್ವಜನಿಕರ ನಡವಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿ ನಗರದ ಜುನæ ಬೆಳಗಾವಿ ನಿವಾಸಿ ವಿಜಯ ರಾಮಸುತಾರ ಯಾದವ (38) ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬೆಳಗಾವಿ ನಗರದ ಎರಡನೇ ರೈಲ್ವೆ ಗೇಟ್‌ ಬಳಿ ಶುಕ್ರವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.

ಈ ವೇಳೆ ನಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದರೂ ಘಟನೆಯನ್ನು ನೋಡಿದವರಲ್ಲಿ ಕೆಲವರು ಮಾನವೀಯತೆ ಮರೆತು ತಮಗೇನು ಸಂಬಂಧವಿಲ್ಲ ಎಂಬಂತæ ಸುಮ್ಮನೆ ಹೊರಟರೆ, ಇನ್ನೂ ಕೆಲವರು ಮೊಬೈಲನಲ್ಲಿ ವಿಡಿಯೋ ಮಾಡುತ್ತಾ ಆಂಬ್ಯುಲೆನ್ಸ್‌ಗಾಗಿ ಕಾಯುತ್ತಾ ಕಾಲಹರಣ ಮಾಡಿದ್ದರು.

ಅಲ್ಲದೆ, ಖಾಸಗಿ ವಾಹನ ಚಾಲಕರು ಗಾಯಗೊಂಡಿದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲೂ ಹಿಂದೇಟು ಹಾಕಿದ್ದರು. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಗಾಯಗೊಂಡ ವ್ಯಕ್ತಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- ವೈರಲ್ ಚೆಕ್ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ