Fact Check: ಪ್ರಧಾನಿ ಮೋದಿಯಿಂದ ಈ ಬಾರಿ ‘ಸ್ವದೇಶಿ ದೀಪಾವಳಿ’ಗೆ ಕರೆ?

Published : Aug 22, 2019, 10:11 AM IST
Fact Check: ಪ್ರಧಾನಿ ಮೋದಿಯಿಂದ ಈ ಬಾರಿ ‘ಸ್ವದೇಶಿ ದೀಪಾವಳಿ’ಗೆ ಕರೆ?

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ತ ಜನರನ್ನು ಉದ್ದೇಶಿಸಿ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಮುಂಬರುವ ದೀಪಾವಳಿಗೆ ದೇಶದ ಪ್ರತಿಯೊಬ್ಬ ನಾಗರಿಕರೂ ಅನ್ಯ ದೇಶಗಳು ಉತ್ಪಾದಿಸಿದ ವಸ್ತುಗಳನ್ನು ಖರೀದಿಸದೇ ದೇಶದಲ್ಲಿಯೇ ಉತ್ಪಾದನೆಯಾದ ವಸ್ತುಗಳನ್ನು ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದಿದೆ.  ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ತ ಜನರನ್ನು ಉದ್ದೇಶಿಸಿ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರಲ್ಲಿ ಮುಂಬರುವ ದೀಪಾವಳಿಗೆ ದೇಶದ ಪ್ರತಿಯೊಬ್ಬ ನಾಗರಿಕರೂ ಅನ್ಯ ದೇಶಗಳು ಉತ್ಪಾದಿಸಿದ ವಸ್ತುಗಳನ್ನು ಖರೀದಿಸದೇ ದೇಶದಲ್ಲಿಯೇ ಉತ್ಪಾದನೆಯಾದ ವಸ್ತುಗಳನ್ನು ಖರೀದಿಸುವಂತೆ ಕೇಳಿಕೊಂಡಿದ್ದಾರೆ ಎಂದಿದೆ.

ಪತ್ರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರ ಹಸ್ತಾಕ್ಷರವಿದೆ. ಸದ್ಯ ಈ ಸಂದೇಶ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್‌ ಆಗುತ್ತಿದೆ. ಸ್ವದೇಶೀ ವಸ್ತುಗಳಿಗೆ ಮತ್ತು ಸ್ವದೇಶಿ ಉದ್ಯಮಿಗಳಿಗೆ ಆದ್ಯತೆ ನೀಡಿ ದೇಶದ ಅಭಿವೃದ್ಧಿಗೆ ಮೋದಿ ಶತಪ್ರಯತ್ನ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಕೊಂಡಾಡಿದ್ದಾರೆ.

ಆದರೆ ನಿಜಕ್ಕೂ ಮೋದಿ ಅವರೇ ಈ ಪತ್ರ ಬರೆದು ದೇಶದ ನಾಗರಿಕರಿಗೆ ಸಂದೇಶ ನೀಡಿದ್ದರೇ ಎಂದು ಪರಿಶೀಲಿಸಿದಾಗ ಈ ಸುದ್ದಿ ಸುಳ್ಳು ಎಂಬದಕ್ಕೆ ಹಲವು ಸಾಕ್ಷ್ಯಗಳು ಲಭ್ಯವಾಗಿವೆ. 2016ರಲ್ಲಿಯೂ ಇದೇ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಬಳಿಕ ಪ್ರಧಾನಮಂತ್ರಿ ಅವರ ಅಧಿಕೃತ ಟ್ವೀಟರ್‌ ಖಾತೆ ಮೂಲಕ ಪ್ರಧಾನಿ ಕಾರ್ಯಾಲಯ ಇದೊಂದು ನಕಲಿ ಪತ್ರವೆಂದು ಸ್ಪಷ್ಟನೆ ನೀಡಿತ್ತು.

ಅಲ್ಲದೆ ಈಗ ವೈರಲ್‌ ಆಗಿರುವ ಪತ್ರದಲ್ಲಿ ಬಳಸಲಾದ ಲೈನ್‌ ಸ್ಪೇಸ್‌ ಮತ್ತು ಅಲೈನ್‌ಮೆಂಟ್‌ ಸಾಮಾನ್ಯವಾಗಿ ಪ್ರಧಾನಮಂತ್ರಿ ಕಳಿಸುವ ಪತ್ರಗಳಿಗಿಂತ ಭಿನ್ನವಾಗಿದೆ. ಹಾಗೆಯೇ ನರೇಂದ್ರ ಮೋದಿ ಹಸ್ತಾಕ್ಷವು ಅಂತರ್ಜಾಲದಲ್ಲಿ ಲಭ್ಯವಿದೆ. ಅದನ್ನೇ ತೆಗೆದು ಸೂಪರ್‌ ಇಂಪೋಸ್‌ ಮಾಡಲಾಗಿದೆ. ಅಲ್ಲಿಗೆ ದೀಪಾವಳಿಗೆ ಸ್ವದೇಶಿ ವಸ್ತುಗಳನ್ನೇ ಖರೀದಿ ಮಾಡಿ ಎಂದು ಮೋದಿ ಪತ್ರ ಬರೆದಿದ್ದು ಸುಳ್ಳು ಸುದ್ದಿ.

- ವೈರಲ್ ಚೆಕ್ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!
ಮೋನಿಕಾ ಜೊತೆ ಪೊಲೀಸಪ್ಪನ ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್, ಕಿಚುಕಿಚುಮಾ ಎಂದ ರೀಲ್ಸ್ ರಾಣಿ