Fact check: ಡಿಕೆಶಿ ಮನೆಯಲ್ಲಿದ್ದ ಕಂತೆ ಕಂತೆ ಹಣ ಸಿಕ್ತಾ?

Published : Sep 06, 2019, 09:06 AM IST
Fact check: ಡಿಕೆಶಿ ಮನೆಯಲ್ಲಿದ್ದ ಕಂತೆ ಕಂತೆ ಹಣ ಸಿಕ್ತಾ?

ಸಾರಾಂಶ

ಡಿ.ಕೆ. ಶಿವಕುಮಾರ್‌ ಅವರ ದೆಹಲಿ ಬಂಗಲೆಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಅಕ್ರಮವಾಗಿ ಶೇಖರಿಸಿಟ್ಟ ಲಕ್ಷಾಂತರ ರು. ಲಭ್ಯವಾಗಿದೆ ಎನ್ನುವ ಸಂದೇಶದೊಂದಿಗೆ ಅಪಾರ ಪ್ರಮಾಣದಲ್ಲಿ ಜೋಡಿಸಿಟ್ಟನೋಟುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

ಭ್ರಷ್ಟಾಚಾರ ಪ್ರಕರಣದಡಿ ಕಾರ್ನಾಟಕದ ಮಾಜಿ ಸಚಿವ ಮತ್ತು ಕರ್ನಾಟಕ ಕಾಂಗ್ರೆಸ್‌ ಮುಖಂಡ ಡಿ.ಕೆ ಶಿವಕುಮಾರ್‌ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್‌ ಅವರ ದೆಹಲಿ ಬಂಗಲೆಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಅಕ್ರಮವಾಗಿ ಶೇಖರಿಸಿಟ್ಟಲಕ್ಷಾಂತರ ರು. ಲಭ್ಯವಾಗಿದೆ ಎನ್ನುವ ಸಂದೇಶದೊಂದಿಗೆ ಅಪಾರ ಪ್ರಮಾಣದಲ್ಲಿ ಜೋಡಿಸಿಟ್ಟನೋಟುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೋದೊಂದಿಗೆ ‘ಇದು ಕರ್ನಾಟಕದ ಮಾಜಿ ಸಚಿವ ಡಿಕೆಶಿ ಅವರ ಮನೆಯಲ್ಲಿ ಕೂಡಿಟ್ಟಅಕ್ರಮ ಹಣ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುವ ಸುದ್ದಿ ತಿಳಿಯುತ್ತಿದ್ದಂತೆಯೇ ಕೋಣೆಯಲ್ಲಿ ಕೂಡಿಟ್ಟಹಣಕ್ಕೆ ಬೆಂಕಿ ಇಡುವ ಪ್ರಯತ್ನವೂ ನಡೆದಿದೆ. ಇದು ಕಾಂಗ್ರೆಸ್‌ನ ಮತ್ತೊಂದು ಭ್ರಷ್ಟಮುಖ’ ಎಂದು ಒಕ್ಕಣೆ ಬರೆಯಲಾಗಿದೆ.

ಆದರೆ ನಿಜಕ್ಕೂ ಡಿಕೆಶಿ ಅವರ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಅಕ್ರಮ ಹಣ ಪತ್ತೆಯಾಗಿತ್ತೇ, ಐಟಿ ದಾಳಿ ವೇಳೆ ಅದನ್ನು ಸುಡುವ ಪ್ರಯತ್ನ ನಡೆದಿತ್ತೇ ಎಂದು ಪರಿಶೀಲಿಸಿದಾಗ ಇದೊಂದು ಸುಳ್ಳು ಸುದ್ದಿ ಎಂದು ತಿಳಿದುಬಂದಿದೆ.

ಬೂಮ್‌ ಲೈವ್‌ ಸುದ್ದಿ ಸಂಸ್ಥೆಯು ಸುದ್ದಿಯ ಜಾಡು ಹಿಡಿದು ತನಿಖೆಗೊಳಪಡಿಸಿದಾಗ ವೈರಲ್‌ ಆಗಿರುವ ವಿಡಿಯೋ ಯುರೋಪಿಯನ್‌ ಕಲೆಗಾರ ಅಲೆಜಾಂಡ್ರೋ ಮೋಂಗೇ ಅವರ ಕೈಚಳಕದಲ್ಲಿ ಮೂಡಿರುವ ಚಿತ್ರಕಲೆ ಎಂದು ಸ್ಪಷ್ಟವಾಗಿದೆ. ಇದೇ ವಿಡಿಯೋ ಕಳೆದ ವರ್ಷವೂ ತಮಿಳು ನಾಡಿನ ರಾಜಕಾರಣಿಯೊಬ್ಬರ ಮನೆಯಲ್ಲಿ ಲಕ್ಷ ಲಕ್ಷ ಹಣ ಎಂದು ಸೋಷಿಯಲ್‌ ಮಿಡಿಯಾದಲ್ಲಿ ಹರಿದಾಡಿತ್ತು.

- ವೈರಲ್ ಚೆಕ್ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!