
ನವದೆಹಲಿ(ಅ.18): ನಕಲಿ ಪ್ರಮಾಣ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ದೆಹಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದು, ಸಚಿವರಿಗೆ ಅನಗತ್ಯವಾಗಿ ಕಿರುಕುಳ ನೀಡುವ ಕಾರಣದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ಸಚಿವರು 11 ವರ್ಷದ ಹಿಂದೆಯೇ ಪ್ರಮಾಣ ಪತ್ರಗಳನ್ನು ಕಳೆದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಮುಂದುವರಿಸಲು ದೂರುದಾರರು ನೀಡಿರುವ ಸಾಕ್ಷಿಗಳು ಸಾಕಾಗುವುದಿಲ್ಲ' ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ವಿಂದರ್ ಸಿಂಗ್ ತಿಳಿಸಿದ್ದಾರೆ. ಕೋರ್ಟ್ ನೀಡಿರುವ ತೀರ್ಪಿನಿಂದ ಸಚಿವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.
ಅಮೀರ್ ಖಾನ್ ಎಂಬುವವರು ಕಳೆದ ವರ್ಷ ಸಚಿವೆ ಸ್ಮೃತಿ ಹಿರಾನಿ ಅವರು ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ತಮ್ಮ ಅಫಿಡವಿಟ್'ನಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದರು ಎಂದು ಪ್ರಕರಣ ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.