ನಕಲಿ ಅಂಕಪಟ್ಟಿ ಸೃಷ್ಟಿಸುತ್ತಿದ್ದ ಬೃಹತ್ ಜಾಲ ಪತ್ತೆ, ರ್ಯಾಂಕ್ ವಿಜೇತರಿಂದಲೇ ನಡೀತಿದೆ ಡೀಲ್​​!

Published : Sep 27, 2016, 06:29 AM ISTUpdated : Apr 11, 2018, 01:10 PM IST
ನಕಲಿ ಅಂಕಪಟ್ಟಿ ಸೃಷ್ಟಿಸುತ್ತಿದ್ದ ಬೃಹತ್ ಜಾಲ ಪತ್ತೆ, ರ್ಯಾಂಕ್ ವಿಜೇತರಿಂದಲೇ ನಡೀತಿದೆ ಡೀಲ್​​!

ಸಾರಾಂಶ

ಶಿವಮೊಗ್ಗ(ಸೆ.27): ನಕಲಿ ಅಂಕಪಟ್ಟಿ ಸೃಷ್ಟಿಸುತ್ತಿದ್ದ ಬೃಹತ್ ಜಾಲವನ್ನು ಪತ್ತೆ ಹಚ್ಚುವಲ್ಲಿ  ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಸಂಬಂಧ ರಾಜ್ಯ ಹಾಗೂ ಹೊರರಾಜ್ಯದ ಎಂಟು ಮಂದಿಯನ್ನು ಬಂಧಿಸಿದ್ದಾರೆ.  ಇಷ್ಟೇ ಅಲ್ಲದೆ ರಾಜ್ಯದ ವಿವಿಧೆಡೆ ಇರುವ 9 ವಿದ್ಯಾಸಂಸ್ಥೆಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಪೂನಾದಲ್ಲಿದ್ದ ಮೂವರು ಆರೋಪಿಗಳು ಎಂಸಿಎ, ಎಂಬಿಎ ಪದವಿಯಲ್ಲಿ ಅಂಕ ವಿಜೇತರಾಗಿದ್ದು, ಕರ್ನಾಟಕ ಮಾತ್ರವಲ್ಲದೇ ಇನ್ನೂ ಹಲವು ರಾಜ್ಯಗಳಲ್ಲಿ ಮಧ್ಯವರ್ತಿಗಳನ್ನು ನೇಮಿಸಿಕೊಂಡು ತಮ್ಮ ಕೆಲಸ ನಡೆಸುತ್ತಿದ್ದರು.

ಶಿವಮೊಗ್ಗ ಜಿಲ್ಲೆಯ ಸೊರಬದ ತೌನಿಫ್ ಭಾಷ ಎಂಬಾತ ಮಂಗಳೂರಿನಲ್ಲಿರುವ ಕಚೇರಿಗೆ ಪಾಸ್‌ಪೋರ್ಟ್‌ಗಾಗಿ ನಕಲಿ ಅಂಕಪಟ್ಟಿ ಸಲ್ಲಿಸಿದ್ದು, ಈ ಮೂಲಕ ಶಿವಮೊಗ್ಗ ಪೋಲಿಸರು ಮೂಲ ಹುಡುಕಲು ತನಿಖೆ ನಡೆಸಿದಾಗ ಬೃಹತ್ ಜಾಲವೇ ಪತ್ತೆಯಾಗಿದೆ. 

ಅನುಮಾನಗೊಂಡ ಪಾಸ್‌ಪೋರ್ಟ್ ಅಧಿಕಾರಿಗಳು ಪರಿಶೀಲನೆಗೆಂದು ಜಿಲ್ಲಾ ಪೊಲೀಸ್ ಕಚೇರಿಗೆ ಕಳುಹಿಸಿದರು. ತನಿಖೆ ನಡೆಸಿದಾಗ ಭಾರಿ ವಂಚನೆ ಪತ್ತೆಯಾಗಿದೆ. 

ಸೊರಬ ಠಾಣೆಗೆ ತೌಪಿಷ್‌ನನ್ನು ಕರೆಸಿ ವಿಚಾರಣೆ ನಡೆಸಿದಾಗ  ಸೊರಬದ ಹನುಮಂತಪ್ಪ ಎಂಬಾತನ ಬಳಿ 12 ಸಾವಿರ ಹಣ ಕೊಟ್ಟು ಅಂಕಪಟ್ಟಿ ಪಡೆದಿದ್ದಾಗಿ ಹೇಳಿದ್ದಾನೆ. ಹನುಮಂತಪ್ಪನ ವಿರುದ್ಧ ಕೇಸು ದಾಖಲಿಸಿ, ವಿಚಾರಣೆಗೊಳ ಪಡಿಸಿದಾಗ ಪೂನಾದ ಮೂವರು ನಕಲಿ ಅಂಕಪಟ್ಟಿ ಸರಬರಾಜು ಮಾಡುತ್ತಿದ್ದುದು ಬಯಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀಯ 5 ಸಾವಿರ ಕೋಟಿ ಮಿಸ್‌ ಆಗಿದ್ದು ಹೇಗೆ?: ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
ಕ್ರೀಡಾ ಕ್ಷೇತ್ರದಲ್ಲಿದ್ದ ಪಕ್ಷಪಾತಕ್ಕೆ ಹಿಂದೆಯೇ ಕಡಿವಾಣ : ಪ್ರಧಾನಿ ನರೇಂದ್ರ ಮೋದಿ