
ಬೆಂಗಳೂರು (ಜೂ. 26): ನಟ ರಮೇಶ್ ಅರವಿಂದ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರದಲ್ಲಿ ಮೊದಲ ಸುತ್ತಿಗೆ ಆಯ್ಕೆಯಾದವರಿಗೆ ಕಠಿಣ ಪ್ರಶ್ನೆಯೊಂದು ಎದುರಾಗಿದೆ.
ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಎಷ್ಟು ದಿನ ಅಧಿಕಾರದಲ್ಲಿ ಇರಲಿದೆ ಎಂಬ ಪ್ರಶ್ನೆಯನ್ನು ಕೇಳಲಾಗಿದೆ. ಇದಕ್ಕೆ 100 ದಿನ, 200 ದಿನ, 400 ದಿನ, 500 ದಿನ ಎಂಬ ನಾಲ್ಕು ಆಯ್ಕೆಗಳನ್ನು ನೀಡಲಾಗಿದೆ. ಈ ಪ್ರಶ್ನೆಗೆ ಉತ್ತರ ಹೇಳಿದರೆ ಮಾತ್ರ ಕೋಟಿ ರು. ಸಿಗಲಿದೆ. ಆದರೆ, ಈ ಮೇಲಿನ ಯಾವುದೇ ಆಯ್ಕೆಯನ್ನು ಹೇಳಿದರೂ ತಪ್ಪು ಉತ್ತರ ಆಗುವುದರಿಂದ ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದ್ದಾರೆ.
ಇನ್ನು ಕೆಲವರು ಹೆಲ್ಪ್ಲೈನ್ ಬಳಸಿ ಕುಮಾರಸ್ವಾಮಿಗೇ ಫೋನ್ ಮಾಡಿದ್ದು, ಅವರೂ ಸಹ ಉತ್ತರ ಹೇಳಲು ಸಾಧ್ಯವಾಗಿಲ್ಲ ಎಂದಿದ್ದಾರೆಂದು ಸುಳ್ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.