
ನವದೆಹಲಿ : ದೀಪಾವಳಿಯಲ್ಲಿ ಪಟಾಕಿಯಿಂದ ಆಗುವ ಮಾಲಿನ್ಯ ತಡೆಯಲು ಸುಪ್ರೀಂಕೋರ್ಟ್ ಹಲವಾರು ನಿರ್ಬಂಧ ಹೇರಿದೆ. ಹೀಗಾಗಿ ಈ ಬಾರಿ ಶಿವಕಾಶಿಯಲ್ಲಿ ಮಾಲಿನ್ಯ ಕಾರಕ ಪಟಾಕಿಗಳ ತಯಾರಿಕೆ ಸ್ಥಗಿತಗೊಳಿಸಲಾಗಿದೆ. ಅದರ ಬದಲು ಬೆಂಕಿ ಹಚ್ಚದೇ ಹೊಡೆಯಬಹುದಾದ ಡಿಜಿಟಲ್ ಪಟಾಕಿಗಳನ್ನು ಸಿದ್ಧಪಡಿಸಲಾಗಿದೆ.
ಈ ಪಟಾಕಿಯನ್ನು ಖರೀದಿಸಲು ಶಿವಕಾಶಿ ಪಟಾಕಿ ಮೊಬೈಲ್ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ವಿವಿಧ ರೀತಿ ಪಟಾಕಿಗಳಿದ್ದು, ಅವುಗಳ ಮೇಲೆ ಕ್ಲಿಕ್ ಮಾಡಿದರೆ, ಪಟಾಕಿ ಸಿಡಿಯಲಿದೆ.
ಜೋರಾಗಿ ಶಬ್ದ ಕೇಳಬೇಕಾದರೆ ಕಿವಿಗೆ ಇಯರ್ ಫೋನ್ ಹಾಕಿಕೊಳ್ಳಬೇಕು ಎಂಬ ಸಲಹೆ ನೀಡಲಾಗಿದೆ. ಇದರಿಂದ ಹೊಗೆ ಹಾಗೂ ಶಬ್ದ ಮಾಲಿನ್ಯ ಎರಡೂ ಇರುವುದಿಲ್ಲ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.