ವೈರಲ್ ಚೆಕ್: ಪುಲ್ವಾಮಾ ದಾಳಿ ಬಿಜೆಪಿಯ ಪಿತೂರಿ ಎಂದರೇ ಅಭಿನಂದನ್?

Published : May 14, 2019, 10:44 AM ISTUpdated : May 14, 2019, 10:50 AM IST
ವೈರಲ್ ಚೆಕ್: ಪುಲ್ವಾಮಾ ದಾಳಿ ಬಿಜೆಪಿಯ ಪಿತೂರಿ ಎಂದರೇ ಅಭಿನಂದನ್?

ಸಾರಾಂಶ

ಪುಲ್ವಾಮಾ ದಾಳಿ ಬಳಿಕ ಭಾರತದ ಗಡಿಯೊಳಗೆ ಬಂದಿದ್ದ ಎಫ್-16 ಯುದ್ಧ ವಿಮಾನವನ್ನು ಬೆನ್ನಟ್ಟಿ ಪಾಕ್‌ಗೆ ಸೆರೆ ಸಿಕ್ಕಿ ಮತ್ತೆ ಭಾರತಕ್ಕೆ ವಾಪಸ್ಸಾದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ಧಿ? ಏನಿದರ ಸತ್ಯಾಸತ್ಯತೆ? 

ಪುಲ್ವಾಮಾ ದಾಳಿ ಬಳಿಕ ಭಾರತದ ಗಡಿಯೊಳಗೆ ಬಂದಿದ್ದ ಎಫ್-೧೬ ಯುದ್ಧ ವಿಮಾನವನ್ನು ಬೆನ್ನಟ್ಟಿ ಪಾಕ್‌ಗೆ ಸೆರೆ ಸಿಕ್ಕಿ ಮತ್ತೆ ಭಾರತಕ್ಕೆ ವಾಪಸ್ಸಾದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅದರಲ್ಲಿ ಪುಲ್ವಾಮಾ ದಾಳಿ ಬಿಜೆಪಿಯ ಪಿತೂರಿ ಎಂದು ಹೇಳಲಾಗಿದೆ. ವೈರಲ್ ಆಗಿರುವ ಹೇಳಿಕೆಯಲ್ಲಿ, ‘ಪುಲ್ವಾಮಾ ದಾಳಿಯು ಬಿಜೆಪಿಯ ಪಿತೂರಿ. ಚುನಾವಣೆಯಲ್ಲಿ ಗೆಲ್ಲಲು ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೆರವು ನೀಡಿದ್ದಾರೆ. ಅದಕ್ಕಾಗಿಯೇ ಪಾಕ್ ಮೇಲೆ ಬಿಜೆಪಿ ನಕಲಿ ದಾಳಿ ನಡೆಸಿತು. ಇಮ್ರಾನ್ ಒಪ್ಪಿಗೆಯ ಮೇರೆಗೇ ಬಾಲಾಕೋಟ್ ದಾಳಿ ನಡೆದಿದೆ’ ಎಂದಿದೆ.

‘ಇಂಡಿಯಾ ಪೇಜ್ 24 ಹಿಂದಿ’ ಎಂಬ ಹೆಸರಿನ ಫೇಸ್‌ಬುಕ್ ಪೇಜ್ ಇದನ್ನು ಪೋಸ್ಟ್ ಮಾಡಿದ್ದು, ಸದ್ಯ ಅದೀಗ 8000 ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ವಿಂಗ್ ಕಮಾಂಡರ್ ಅಭಿನಂದನ್ ಈ ಹೇಳಿಕೆ ನೀಡಿದ್ದರೇ ಎಂದು ಅವರ ಇತ್ತೀಚಿನ ಹೇಳಿಕೆಗಳನ್ನು ‘ಬೂಮ್’ ಸುದ್ದಿಸಂಸ್ಥೆ ಪರಿಶೀಲಿಸಿದಾಗ ಇದೊಂದು ಸುಳ್ಳು ಸುದ್ದಿ ಎಂದು ತಿಳಿದಿದೆ.

ಅಲ್ಲದೆ ಈಗ್ಕಿಅಲ್ತಾಫ್ ಖಾನ್ ಎಂಬುವವರು ಇದೇ ಗ್ರಾಫಿಕ್ ಅನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ, ‘ಸ್ನೇಹಿತರೇ, ಈ ಹೇಳಿಕೆಯನ್ನಿಟ್ಟುಕೊಂಡು ನನ್ನನ್ನು ನಿಂದಿಸಬೇಡಿ. ಈ ಪೋಸ್ಟ್ ಮೂಲಕ ಸತ್ಯ ಹೇಳುತ್ತಿದ್ದೇನೆ. ಬಿಜೆಪಿಗರ ಕಣ್ಣಿಗೆ ಇದು ಸುಳ್ಳಾಗಿರಬಹುದು, ಆದರೆ ಇದೇ ಸತ್ಯ..!’ ಎಂದು ಒಕ್ಕಣೆ ಬರೆದಿದ್ದಾರೆ. ಈ ಹಿಂದೆಯೂ ಅಭಿನಂದನ್ ಹೆಸರಿನಲ್ಲಿ ಅನೇಕ ಸುಳ್ಳುಸುದ್ದಿಗಳು ಹರಿದಾಡಿದ್ದು, ಸದ್ಯ ಈ ಹೇಳಿಕೆಯೂ ಅದೇ ಸಾಲಿಗೆ ಸೇರುತ್ತದೆ ಎಂಬುದು ಸ್ಪಷ್ಟ. 

- ವೈರಲ್ ಚೆಕ್ 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ