ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟಕ ಯಾವ ದೇವಸ್ಥಾನಕ್ಕೆ ಹೋದರೂ ನಿವಾರಣೆಯಾಗದೆ ಇರುವುದನ್ನು ನೋಡಿ ಆತಂಕಗೊಂಡಿರುವ ಸಿಎಂ ಕುಮಾರಸ್ವಾಮಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದಾರೆ.
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟಕ ಯಾವ ದೇವಸ್ಥಾನಕ್ಕೆ ಹೋದರೂ ನಿವಾರಣೆಯಾಗದೆ ಇರುವುದನ್ನು ನೋಡಿ ಆತಂಕಗೊಂಡಿರುವ ಸಿಎಂ ಕುಮಾರಸ್ವಾಮಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದಾರೆ.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜೊತೆ ಸೇರಿಯೇ ಈ ನಿರ್ಧಾರ ಕೈಗೊಂಡಿದ್ದು, ಯಡಿಯೂರಪ್ಪ ಅವರು ಮೈತ್ರಿಕೂಟದ ಶಾಸಕರನ್ನು ಸೆಳೆಯುವುದನ್ನು ತಪ್ಪಿಸಲು ಯಡಿಯೂರಪ್ಪ ಅವರನ್ನೇ ಮೈತ್ರಿಕೂಟಕ್ಕೆ ಆಹ್ವಾನಿಸಲು ಸಜ್ಜಾಗಿದ್ದಾರೆ.
ಈ ಹೊಸ ಪ್ಲಾನ್ ಪ್ರಕಾರ ಯಡಿಯೂರಪ್ಪ ಅವರನ್ನೇ ಮೈತ್ರಿಕೂಟದ ಸರ್ಕಾರಕ್ಕೆ ಮುಖ್ಯಮಂತ್ರಿ ಮಾಡಲಾಗುತ್ತದೆ. ಆಗ ಎಲ್ಲ ಬಂಡಾಯಗಳೂ ನಿಲ್ಲಲಿವೆ ಎಂದು ಸುಳ್ಸುದ್ದಿ ಮೂಲಗಳು ಹೇಳಿವೆ.