[ಸುಳ್ ಸುದ್ದಿ] ರಾಜ್ಯಕ್ಕೆ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಮಾಡಲು ನಿರ್ಧಾರ?

By Web DeskFirst Published Sep 23, 2018, 11:41 AM IST
Highlights

 ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟಕ ಯಾವ ದೇವಸ್ಥಾನಕ್ಕೆ ಹೋದರೂ ನಿವಾರಣೆಯಾಗದೆ ಇರುವುದನ್ನು ನೋಡಿ ಆತಂಕಗೊಂಡಿರುವ ಸಿಎಂ ಕುಮಾರಸ್ವಾಮಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದಾರೆ.

ಬೆಂಗಳೂರು:  ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟಕ ಯಾವ ದೇವಸ್ಥಾನಕ್ಕೆ ಹೋದರೂ ನಿವಾರಣೆಯಾಗದೆ ಇರುವುದನ್ನು ನೋಡಿ ಆತಂಕಗೊಂಡಿರುವ ಸಿಎಂ ಕುಮಾರಸ್ವಾಮಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದಾರೆ.

 ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜೊತೆ ಸೇರಿಯೇ ಈ ನಿರ್ಧಾರ ಕೈಗೊಂಡಿದ್ದು, ಯಡಿಯೂರಪ್ಪ ಅವರು ಮೈತ್ರಿಕೂಟದ ಶಾಸಕರನ್ನು ಸೆಳೆಯುವುದನ್ನು ತಪ್ಪಿಸಲು ಯಡಿಯೂರಪ್ಪ ಅವರನ್ನೇ ಮೈತ್ರಿಕೂಟಕ್ಕೆ ಆಹ್ವಾನಿಸಲು ಸಜ್ಜಾಗಿದ್ದಾರೆ. 

ಈ ಹೊಸ ಪ್ಲಾನ್ ಪ್ರಕಾರ ಯಡಿಯೂರಪ್ಪ ಅವರನ್ನೇ ಮೈತ್ರಿಕೂಟದ ಸರ್ಕಾರಕ್ಕೆ ಮುಖ್ಯಮಂತ್ರಿ ಮಾಡಲಾಗುತ್ತದೆ. ಆಗ ಎಲ್ಲ ಬಂಡಾಯಗಳೂ ನಿಲ್ಲಲಿವೆ ಎಂದು ಸುಳ್‌ಸುದ್ದಿ ಮೂಲಗಳು ಹೇಳಿವೆ.

click me!