[ಸುಳ್ ಸುದ್ದಿ] ರಾಜ್ಯಕ್ಕೆ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಮಾಡಲು ನಿರ್ಧಾರ?

Published : Sep 23, 2018, 11:41 AM ISTUpdated : Sep 23, 2018, 11:43 AM IST
[ಸುಳ್ ಸುದ್ದಿ] ರಾಜ್ಯಕ್ಕೆ ಯಡಿಯೂರಪ್ಪ ಅವರನ್ನೇ ಮುಖ್ಯಮಂತ್ರಿ ಮಾಡಲು ನಿರ್ಧಾರ?

ಸಾರಾಂಶ

 ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟಕ ಯಾವ ದೇವಸ್ಥಾನಕ್ಕೆ ಹೋದರೂ ನಿವಾರಣೆಯಾಗದೆ ಇರುವುದನ್ನು ನೋಡಿ ಆತಂಕಗೊಂಡಿರುವ ಸಿಎಂ ಕುಮಾರಸ್ವಾಮಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದಾರೆ.

ಬೆಂಗಳೂರು:  ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟಕ ಯಾವ ದೇವಸ್ಥಾನಕ್ಕೆ ಹೋದರೂ ನಿವಾರಣೆಯಾಗದೆ ಇರುವುದನ್ನು ನೋಡಿ ಆತಂಕಗೊಂಡಿರುವ ಸಿಎಂ ಕುಮಾರಸ್ವಾಮಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದಾರೆ.

 ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜೊತೆ ಸೇರಿಯೇ ಈ ನಿರ್ಧಾರ ಕೈಗೊಂಡಿದ್ದು, ಯಡಿಯೂರಪ್ಪ ಅವರು ಮೈತ್ರಿಕೂಟದ ಶಾಸಕರನ್ನು ಸೆಳೆಯುವುದನ್ನು ತಪ್ಪಿಸಲು ಯಡಿಯೂರಪ್ಪ ಅವರನ್ನೇ ಮೈತ್ರಿಕೂಟಕ್ಕೆ ಆಹ್ವಾನಿಸಲು ಸಜ್ಜಾಗಿದ್ದಾರೆ. 

ಈ ಹೊಸ ಪ್ಲಾನ್ ಪ್ರಕಾರ ಯಡಿಯೂರಪ್ಪ ಅವರನ್ನೇ ಮೈತ್ರಿಕೂಟದ ಸರ್ಕಾರಕ್ಕೆ ಮುಖ್ಯಮಂತ್ರಿ ಮಾಡಲಾಗುತ್ತದೆ. ಆಗ ಎಲ್ಲ ಬಂಡಾಯಗಳೂ ನಿಲ್ಲಲಿವೆ ಎಂದು ಸುಳ್‌ಸುದ್ದಿ ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!