ನಾಳೆಯೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ? ಸುಳ್ ಸುದ್ದಿ

Published : Aug 27, 2018, 04:23 PM ISTUpdated : Sep 09, 2018, 10:18 PM IST
ನಾಳೆಯೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ? ಸುಳ್ ಸುದ್ದಿ

ಸಾರಾಂಶ

ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಸೋತಿರುವ ನಾನು ಮತ್ತೊಂದು ಕ್ಷೇತ್ರದಲ್ಲಿ ಗೆದ್ದಿದ್ದೇನೆ. ಹಾಗಾಗಿ ಇಷ್ಟುಬೇಗ ಮನೆ ಕಡೆ ಮುಖ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. 

ಬೆಂಗಳೂರು :  ರಾಜಕೀಯ ಯಾವತ್ತೂ ನಿಂತ ನೀರಲ್ಲ, ಅದು ಹರಿಯುವ ನೀರು. ಈಗ ಕೊಡಗು, ಕೇರಳದಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಕಾವೇರಿ ನೀರಿನ ರಭಸ ಹೆಚ್ಚಾಗಿದ್ದು, ಹೆಚ್ಚು ನೀರು ಹರಿದಿರುವ ಕಾರಣ ಬದಲಾವಣೆ ಬೇಗ ಆಗಿದೆ. ಹಾಗಾಗಿ ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಲದೇ, ಒಂದು ಕ್ಷೇತ್ರದಲ್ಲಿ ಸೋತಿರುವ ನಾನು ಮತ್ತೊಂದು ಕ್ಷೇತ್ರದಲ್ಲಿ ಗೆದ್ದಿದ್ದೇನೆ. ಹಾಗಾಗಿ ಇಷ್ಟುಬೇಗ ಮನೆ ಕಡೆ ಮುಖ ಮಾಡುವ ಪ್ರಶ್ನೆಯೇ ಇಲ್ಲ. ಬಾದಾಮಿ ಕ್ಷೇತ್ರದ ಜನತೆ ನನಗೆ ಬಾದಾಮಿ ಹಾಲು ಕುಡಿಸಿದ್ದಾರೆ. ಇದರಿಂದ ನನಗೆ ಈಗ ಶಕ್ತಿ ಬಂದಿದೆ. ಮುಖ್ಯಮಂತ್ರಿಯಾಗಿ ಮತ್ತೆ ಸಾಕಷ್ಟುಭಾಗ್ಯಗಳನ್ನು ಮಹಾಜನತೆಗೆ ನೀಡೇ ನೀಡುತ್ತೇನೆ. ಇದಕ್ಕೆ ನನಗೆ ಸ್ವತಃ ಬಿಜೆಪಿಯವರು ತುಂಬು ಹೃದಯದಿಂದ ಸಹಕಾರ ನೀಡಲಿದ್ದಾರೆ ಎಂದು ಸುಳ್‌ ಸುದ್ದಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

[ಸುಳ್ಳು ಸುದ್ದಿ] 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು