
ನವದೆಹಲಿ(ಫೆ.23): ದೆಹಲಿಯ ಎಸ್'ಬಿಐ ಎಟಿಎಂ ಒಂದರಿಂದ ₹2,000 ಮುಖಬೆಲೆಯ ನಕಲಿ ನೋಟುಗಳು ಹೊರ ಬಂದಿವೆ ಎಂಬ ವರದಿಗಳ ಬಗ್ಗೆ ಸರ್ಕಾರ ತನಿಖೆ ಕೈಗೊಳ್ಳಲಿದೆ. ಅಲ್ಲದೆ, ನೂತನ ಮುಖಬೆಲೆ ನೋಟುಗಳ ನಕಲಿ ಮಾಡುವುದರ ತಡೆಗೆ ಸರ್ಕಾರ ಬದ್ಧವಾಗಿದೆ ಎಂದು ವಿತ್ತ ಸಚಿವಾಲಯದ ಸಹಾಯಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ‘ದಕ್ಷಿಣ ದೆಹಲಿಯ ಸಂಗಮ್ ವಿಹಾರದ ಎಸ್'ಬಿಐ ಎಟಿಎಂನಲ್ಲಿ ‘ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಮುದ್ರಿತವಾದ ₹2,000 ಮುಖಬೆಲೆ ನೋಟುಗಳು ಪೂರೈಕೆಯಾಗಿವೆ ಎಂಬ ಚಿಲ್ಲರೆ ಪ್ರಕರಣಗಳ ಬಗ್ಗೆ ಸರ್ಕಾರ ವಿಚಲಿತವಾಗುವುದಿಲ್ಲ,’ ಎಂದಿದ್ದಾರೆ.
ಎಟಿಎಂನಿಂದ ಖೋಟಾ ನೋಟು ಬರಲು ಸಾಧ್ಯವೇ ಇಲ್ಲ. ಆದರೆ, ಪತ್ರಿಕೆಗಳಲ್ಲಿ ಈ ಬಗ್ಗೆ ವರದಿಯಾಗಿದ್ದರೆ ತನಿಖೆ ಕೈಗೊಳ್ಳಲಾಗುತ್ತದೆ,’ ಎಂಬುದಾಗಿ ಅವರು ತಿಳಿಸಿದ್ದಾರೆ. ಕೆಲವರು ಸಮಸ್ಯೆ ಸೃಷ್ಟಿಗಾಗಿಯೇ ಇಂಥ ಕೃತ್ಯಗಳನ್ನು ಮಾಡುತ್ತಾರೆ. ಪ್ರಕರಣದ ತನಿಖೆ ಬಳಿಕವಷ್ಟೇ ಈ ಬಗ್ಗೆ ಹೇಳಲು ಸಾಧ್ಯ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.