
ಬೆಂಗಳೂರು : ಆಪರೇಷನ್ ಕಮಲದ ಮೂಲಕ ಬಿಜೆಪಿಯು ಕಾಂಗ್ರೆಸ್ನ ಅತೃಪ್ತ ಶಾಸಕರನ್ನು ಸೆಳೆಯಲು ಮುಂದಾಗಿದೆ, ಪಕ್ಷಕ್ಕೆ ಬರುವ ಪ್ರತಿ ಶಾಸಕರಿಗೆ 25 ಕೋಟಿ ರು. ಹಣ, ಚುನಾವಣಾ ಖರ್ಚು ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.
ಆದರೆ, ತಮಗೆ ಕೇವಲ 25 ಕೋಟಿ ನೀಡಲಾಗುತ್ತಿದೆ ಎಂಬ ಸುದ್ದಿ ಪ್ರಕಟವಾಗುತ್ತಿರುವುದಕ್ಕೆ ಕೆಲ ಶಾಸಕರು ಬೇಸರ ಮಾಡಿಕೊಂಡಿದ್ದಾರೆ.
ನಮ್ಮ ಬೆಲೆ ಕೇವಲ 25 ಕೋಟಿಯೇ? ಕೊಡುವುದು ಎಷ್ಟಾದರೂ ಕೊಡಲಿ, ಆದರೆ ಕನಿಷ್ಠ ಪಕ್ಷ ಮಾಧ್ಯಮದಲ್ಲಾದರೂ 50 ಅಥವಾ 75 ಕೋಟಿ ಎಂದು ಸುದ್ದಿ ಪ್ರಕಟವಾಗುವಂತೆ ಮಾಡಲಿ ಎಂದು ಶಾಸಕರು ಆಪ್ತರ ಬಳಿ ಹೇಳಿಕೊಂಡಿದ್ದಾರೆಂದು ಸುಳ್ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.