
ಬೆಂಗಳೂರು : ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಜಗಳ, ಹೊಡೆದಾಟದಲ್ಲಿ ನಿರತರಾಗಿದ್ದು, ಪುಡಿ ರೌಡಿಗಳಿಗೆ ಕೆಲಸ ಇಲ್ಲದಂತಾಗಿದೆ. ಇಷ್ಟುದಿನ ಹೊಡೆದಾಟ, ರೌಡಿಸಂ ಮಾಡಿಕೊಂಡು ಇದ್ದ ರೌಡಿಗಳು ಚುನಾವಣೆ ಮುಗಿಯುವ ತನಕ ಬೇರೆ ಕೆಲಸವನ್ನು ಹುಡುಕಿಕೊಳ್ಳುವ ನಿರ್ಧಾರ ಮಾಡಿದ್ದಾರೆ.
ರಾಜಕೀಯ ಪಕ್ಷಗಳು ಹೊಡೆದಾಟ, ಬೆದರಿಕೆ ಮತ್ತಿತರ ಸಣ್ಣಪುಟ್ಟ ಕಾರ್ಯಕ್ಕೆ ನಮ್ಮ ಬಳಿ ಬರುತ್ತಿದ್ದರು. ಆದರೆ, ಈಗ ರಾಜಕೀಯ ಪಕ್ಷಗಳ ಕಾರ್ಯಕರ್ತರೇ ಹೊಡೆದಾಡಿಕೊಳ್ಳುತ್ತಿರುವ ಕಾರಣ ರೌಡಿಸಂಗಾಗಿ ನಮ್ಮ ಬಳಿ ಯಾರೂ ಬರುತ್ತಿಲ್ಲ.
ಪೊಲೀಸರು ಕೂಡ ನಮ್ಮಿಂದ ಹಪ್ತಾ ಕೇಳುವುದನ್ನು ನಿಲ್ಲಿಸಿದ್ದಾರೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಜೀವ ನೋಪಾಯಕ್ಕಾಗಿ ಬೇರೆ ದಾರಿ ಕಂಡುಕೊಂಡಿದ್ದೇವೆ ಎಂದು ನಗರದ ರೌಡಿಯೊಬ್ಬರು ಸುಳ್ ಸುದ್ದಿಗೆ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.