[ಸುಳ್ಳು ಸುದ್ದಿ] ದೇಶದ ಎಲ್ಲಾ ಪ್ರತಿಮೆಗಳಿಗೆ ಸಿಸಿಟಿವಿ-ಸೋಲಾರ್ ಬೇಲಿ..!

Published : Mar 07, 2018, 11:21 AM ISTUpdated : Apr 11, 2018, 12:57 PM IST
[ಸುಳ್ಳು ಸುದ್ದಿ] ದೇಶದ ಎಲ್ಲಾ ಪ್ರತಿಮೆಗಳಿಗೆ ಸಿಸಿಟಿವಿ-ಸೋಲಾರ್ ಬೇಲಿ..!

ಸಾರಾಂಶ

ತ್ರಿಪುರಾದಲ್ಲಿ ರಷ್ಯಾದ ಕ್ರಾಂತಿಕಾರಿ ಕಮ್ಯುನಿಸ್ಟ್ ನಾಯಕ ಲೆನಿನ್‌ನ ಪ್ರತಿಮೆಯನ್ನು ನೆಲಕ್ಕುರುಳಿಸಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಕೆಲವರು ಕೆಡವಿದ್ದಾರೆ.

ಬೆಂಗಳೂರು : ತ್ರಿಪುರಾದಲ್ಲಿ ರಷ್ಯಾದ ಕ್ರಾಂತಿಕಾರಿ ಕಮ್ಯುನಿಸ್ಟ್ ನಾಯಕ ಲೆನಿನ್‌ನ ಪ್ರತಿಮೆಯನ್ನು ನೆಲಕ್ಕುರುಳಿಸಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಕೆಲವರು ಕೆಡವಿದ್ದಾರೆ.

ಇದು ಶೀಘ್ರದಲ್ಲೇ ದೇಶಾದ್ಯಂತ ಹಬ್ಬುವ ಸಾಧ್ಯತೆಯಿದೆ. ಹೀಗಾಗಿ ದೇಶದಲ್ಲಿರುವ ಎಲ್ಲಾ ಪ್ರತಿಮೆಗಳಿಗೂ ಸಿಸಿ ಕ್ಯಾಮೆರಾ ಅಳವಡಿಸಿ, ಸೋಲಾರ್ ಬೇಲಿ ನಿರ್ಮಿಸಿ, 24/7 ಭದ್ರತೆ ಒದಗಿಸುವುದನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಸುಗ್ರೀವಾಜ್ಞೆ ಹೊರಡಿಸಲಿದೆ.

ಹಾಗೆಯೇ, ಎಲ್ಲ ವಿವಾದಿತ ವ್ಯಕ್ತಿಗಳ ಪ್ರತಿಮೆಗೂ ಇನ್ಷೂರೆನ್ಸ್ ಮಾಡಿಸುವುದಾಗಿ ಪ್ರಕಟಿಸಿದೆ. ಪ್ರತಿಮೆಗಳನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸುವ ಬಗ್ಗೆಯೂ ಚಿಂತಿಸಲಾಗಿದ್ದು, ಉತ್ತರ

ಪ್ರದೇಶದಲ್ಲಿರುವ ಮಾಯಾವತಿ ಪ್ರತಿಮೆಗಳನ್ನು ಏನು ಮಾಡಬೇಕು ಎಂಬ ಪ್ರಶ್ನೆ ಬಂದಿರುವುದರಿಂದ ಸದ್ಯಕ್ಕೆ ಈ ನಿರ್ಧಾರವನ್ನು ಮುಂದೂಡಲಾಗಿದೆ. [ಸುಳ್ಳು ಸುದ್ದಿ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ
ಏಕಕಾಲದಲ್ಲಿ ಸ್ಥಳೀಯ ಸಂಸ್ಥೆ ಎಲೆಕ್ಷನ್‌ ಬಗ್ಗೆ ಚಿಂತನೆ : ಡಿ.ಕೆ.ಶಿವಕುಮಾರ್‌