![[ಸುಳ್ಳು ಸುದ್ದಿ] ಕಮಲದ ಮಾರಾಟ, ಹುಲ್ಲು ಹೊರುವುದು, ಕೈ ತೋರಿಸುವುದಕ್ಕೆ ನಿಷೇಧ](https://static.asianetnews.com/images/w-412,h-232,imgid-b8611813-de8b-4299-9123-0a8565698fde,imgname-image.jpg)
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ರಾಜಕೀಯ ಪಕ್ಷಗಳಿಗೆ ಪ್ರಚಾರ ನೀಡುವ ಎಲ್ಲಾ ತರಹದ ಚಟುವಟಿಕೆಗಳನ್ನೂ ಚುನಾವಣಾ ಆಯೋಗ ನಿಷೇಧಿಸಿದೆ.
ಅದರಂತೆ, ಚುನಾವಣೆ ಮುಗಿಯುವವರೆಗೆ ಕಮಲದ ಹೂವನ್ನು ಕೆರೆಗಳಿಂದ ಕೊಯ್ಯುವುದು ಹಾಗೂ ಮಾರಾಟ ಮಾಡುವುದು ನಿಷಿದ್ಧ. ಏಕೆಂದರೆ ಕಮಲದ ಹೂವು ಬಿಜೆಪಿ ಚಿಹ್ನೆ. ಇನ್ನು, ಜನರು ತಮ್ಮ ಕೈಗಳನ್ನು ಮುಚ್ಚಿಕೊಂಡು ಓಡಾಡಬೇ ಕೆಂದು ಸೂಚಿಸಲಾಗಿದೆ.
ಏಕೆಂದರೆ ಹಸ್ತ ಕಾಂಗ್ರೆಸ್ ಚಿಹ್ನೆ. ಅದೇ ರೀತಿ, ರಾಜ್ಯದಲ್ಲಿ ಎಲ್ಲೂ ಮಹಿಳೆಯರು ಹುಲ್ಲು ಹೊರುವಂತಿಲ್ಲ. ಪುರುಷರು ಮಾತ್ರ ಹುಲ್ಲು ಹೊರಬಹುದು. ಏಕೆಂದರೆ ಹುಲ್ಲು ಹೊತ್ತ ಮಹಿಳೆ ಜೆಡಿಎಸ್ ಚಿಹ್ನೆ. ಈ ಆದೇಶವನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಸುಳ್ಸುದ್ದಿ ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.