KRS ನೀರು ಹರಿಸುವುದು ನಿಲ್ಲಿಸಲು ಸುಪ್ರೀಂ ಮೊರೆ ಹೋದ ತಮಿಳುನಾಡು..?

Published : Jul 20, 2018, 03:45 PM IST
KRS ನೀರು ಹರಿಸುವುದು ನಿಲ್ಲಿಸಲು ಸುಪ್ರೀಂ ಮೊರೆ ಹೋದ ತಮಿಳುನಾಡು..?

ಸಾರಾಂಶ

ಇಷ್ಟು ದಿನಗಳ ಕಾಲ ಕಾವೇರಿ ನೀರಿಗಾಗಿ ಖ್ಯಾತೆ ತೆಗೆಯುತ್ತಿದ್ದ ತಮಿಳುನಾಡು ಇದೀಗ ತಮ್ಮ ರಾಜ್ಯಕ್ಕೆ ಬಿಡುತ್ತಿರುವ ನೀರು ನಿಲ್ಲಿಸಬೇಕು ಎಂದು ಇದೀಗ ಸುಪ್ರೀಂ ಮೊರೆ ಹೋಗಿದೆ. 

ಚೆನ್ನೈ : ಇಷ್ಟು ದಿನ ಕಾವೇರಿ ನೀರು ಬಿಡುವಂತೆ ಕ್ಯಾತೆ ತೆಗೆದು ಕರ್ನಾಟಕವನ್ನು ಪೀಡಿಸುತ್ತಿದ್ದ ತಮಿಳುನಾಡು ಇದೀಗ ಕೆ.ಆರ್.ಎಸ್. ಜಲಾಶಯದಿಂದ ನೀರು ಬಿಡುವುದನ್ನು ನಿಲ್ಲಿಸಲು ಆದೇಶ ನೀಡುವಂತೆ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕೆ.ಆರ್.ಎಸ್. ಜಲಾಶಯ ಭರ್ತಿಯಾಗಿ ರುವುದರಿಂದ ಎಲ್ಲಾ ನೀರನ್ನೂ ತಮಿಳುನಾಡಿಗೆ ಬಿಡಲಾಗುತ್ತಿದೆ. 

ಇದರಿಂದ ಮೆಟ್ಟೂರು ಡ್ಯಾಂ ಕೂಡ ತುಂಬಿದೆ. ಡ್ಯಾಮ್ ಪಕ್ಕದಲ್ಲೇ ಸಾವಿರಾರು ಎಕರೆ ಭತ್ತದ ಗದ್ದೆಗಳು ಇರುವುದರಿಂದ ಅವೆಲ್ಲವೂ ಈಗ ಮುಳುಗಡೆ ಯಾಗಲಿದೆ. 

ಹೀಗಾಗಿ ಬೆಳೆಗಳನ್ನು ಉಳಿಸಿಕೆ ಕೊಳ್ಳಲು ಮುಂದಾಗಿರುವ ತಮಿಳುನಾಡು ನೀರು ಬಿಡುವುದನ್ನು ನಿಲ್ಲಿಸುವಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಇದು ಸುಪ್ರೀಂಕೋರ್ಟ್ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ.

[ಸುಳ್ಳು ಸುದ್ದಿ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು