
ಬೆಂಗಳೂರು : ಹೇಳದೆ ಕೇಳದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಲೋಕಸಭೆ ಕಲಾಪದ ವೇಳೆ ತಮ್ಮತ್ತ ನುಗ್ಗಿ ಬಂದು ಅಪ್ಪಿಕೊಂಡಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ತೀವ್ರ ಮುಜುಗರಕ್ಕೊಳಗಾಗಿದ್ದಾರೆ.
ಕೇವಲ ಜಾಗತಿಕ ನಾಯಕರನ್ನು ಮಾತ್ರ ಅಪ್ಪಿಕೊಳ್ಳುತ್ತಿದ್ದ ಅವರಿಗೆ, ಇನ್ನೊಬ್ಬರು, ಅದೂ ರಾಹುಲ್ ಗಾಂಧಿ, ಅಪ್ಪಿಕೊಂಡಿದ್ದು ಎಳ್ಳಷ್ಟೂ ಹಿಡಿಸಿಲ್ಲ. ಹೀಗಾಗಿ ಅವರು ಲೋಕಸಭೆಯಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಬ್ಯಾರಿಕೇಡ್ ಹಾಕಲು ಸೂಚನೆ ನೀಡಿದ್ದಾರೆ.
ಆಗ ರಾಹುಲ್ ಗಾಂಧಿ ಸೇರಿದಂತೆ ಯಾರೊಬ್ಬರೂ ತಮ್ಮತ್ತ ಬರಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಹೇಗಿದ್ದರೂ ತಮ್ಮನ್ನು ಅಪ್ಪಿಕೊಳ್ಳುವಷ್ಟು ಧೈರ್ಯವಿಲ್ಲ ಎಂದು ಮೋದಿ ಯೋಚಿಸಿದ್ದಾರೆಂದು ಸುಳ್ಸುದ್ದಿ ಮೂಲಗಳು ಹೇಳಿವೆ.
[ಸುಳ್ಳು ಸುದ್ದಿ - ಇದು ಕೇವಲ ತಮಾಷೆಗಾಗಿ]
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.