
ನವದೆಹಲಿ: ದಕ್ಷಿಣ ದೆಹಲಿಯ ವಸಂತ್ ವಿಹಾರದಲ್ಲಿ ಸ್ವಿಮ್ಮಿಂಗ್ ಪೂಲ್’ನಲ್ಲಿ ಮುಳುಗಿ ಮೃತಪಟ್ಟರೆನ್ನಲಾದ ಯುವ ಐಏಎಸ್ ಅಧಿಕಾರಿಯ ಸಾವಿನ ಬಗ್ಗೆ ತನಿಖೆಯಾಗಬೇಕೆಂದು ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ.
ಮೃತಪಟ್ಟಿರುವ ಅಧಿಕಾರಿ ಜಮ್ಮು& ಕಾಶ್ಮೀರ ಕೇಡರ್ ಆಶಿಶ್ ದಹಿಯಾ (30) ಉತ್ತಮ ಈಜುಪಟುವಾಗಿದ್ದು, ಪ್ರಮಾದವಶಾತ್ ಈಜುಕೊಳಕ್ಕೆ ಬಿದ್ದು ಮುಳುಗುತ್ತಿದ್ದ ತನ್ನ ಮಹಿಳಾ ಸಹೋದ್ಯೋಗಿಯನ್ನು ರಕ್ಷಿಸಲು ಈಜುಕೊಳಕ್ಕೆ ಧುಮುಕಿದ್ದರು ಎನ್ನಲಾಗಿದೆ.
ಆಶಿಶ್ ಈ ಹಿಂದೆ ಹಿಮಾಜಲ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ತನ್ನ ಗೆಳೆಯರೊಂದಿಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಘಟನೆ ರಾತ್ರಿ 1.30 ಹೊತ್ತಿಗೆ ನಡೆದಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.