'ಅನಿಲ್ ಶವ ಸಿಕ್ಕಾಯಿತಲ್ಲ, ಇನ್ನು ಉದಯ್ ಬಳಿ ಬನ್ನಿ ವಿಜಿಯವರೇ..'

Published : Nov 10, 2016, 03:16 AM ISTUpdated : Apr 11, 2018, 12:53 PM IST
'ಅನಿಲ್ ಶವ ಸಿಕ್ಕಾಯಿತಲ್ಲ, ಇನ್ನು ಉದಯ್ ಬಳಿ ಬನ್ನಿ ವಿಜಿಯವರೇ..'

ಸಾರಾಂಶ

ಸಾಹಸ ನಿರ್ದೇಶಕ ರವಿ ವರ್ಮಾ ಸೇರಿದಂತೆ ಚಿತ್ರರಂಗದ ಎಲ್ಲ ಸ್ನೇಹಿತರನ್ನೂ ಅಂತ್ಯಸಂಸ್ಕಾರಕ್ಕೆ ಆಗಮಿಸಲು ಉದಯ್ ತಂದೆ ಮನವಿ ಮಾಡಿಕೊಂಡರು.

ಬೆಂಗಳೂರು(ನ. 10): ದುನಿಯಾ ವಿಜಿಯವರು ರಾಘವ ಉದಯ್'ನ ಮೃತದೇಹದ ಅಂತಿಮ ದರ್ಶನವನ್ನು ಪಡೆಯುವವರೆಗೂ ಅಂತ್ಯಸಂಸ್ಕಾರ ಕ್ರಿಯೆಯನ್ನು ಪ್ರಾರಂಭಿಸದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಸುವರ್ಣನ್ಯೂಸ್ ಜೊತೆ ಮಾತನಾಡಿದ ಉದಯ್ ಅವರ ತಂದೆ, ತಮ್ಮ ಪುತ್ರನ ಅಂತಿಮ ದರ್ಶನ ಪಡೆಯುವಂತೆ ದುನಿಯಾ ವಿಜಿಯವರಲ್ಲಿ ಮನವಿ ಮಾಡಿಕೊಂಡರು. "ಕೆರೆಯಲ್ಲಿ ನೀವು ಸಾಕಷ್ಟು ಕಷ್ಟಪಟ್ಟಿದ್ದೀರಿ. ಈಗ ಶವ ಸಿಕ್ಕಾಗಿದೆ. ತಾವು ದಯವಿಟ್ಟು ಇಲ್ಲಿಗೆ ಬಂದು ನನ್ನ ಮಗನನ್ನು ನೋಡಬೇಕು ಎಂದು ಕೇಳಿಕೊಳ್ಳುತ್ತೇನೆ" ಎಂದು ಉದಯ್ ತಂದೆ ಹೇಳಿದರು. ದುನಿಯಾ ವಿಜಿಯಷ್ಟೇ ಅಲ್ಲ, ಸಾಹಸ ನಿರ್ದೇಶಕ ರವಿ ವರ್ಮಾ ಸೇರಿದಂತೆ ಚಿತ್ರರಂಗದ ಸ್ನೇಹಿತರು ಅಂತ್ಯಸಂಸ್ಕಾರಕ್ಕೆ ಆಗಮಿಸಬೇಕು ಎಂದೂ ಉದಯ್ ತಂದೆ ಮನವಿ ಮಾಡಿಕೊಂಡರು.

ಇದೇ ವೇಳೆ, ಉದಯ್ ಮತ್ತು ಅನಿಲ್ ಇಬ್ಬರ ಅಂತ್ಯಸಂಸ್ಕಾರವನ್ನು ಒಂದೇ ಕಡೆ ಒಮ್ಮೆಗೇ ನಡೆಸಲಾಗುವುದು ಎಂಬ ಸುದ್ದಿಯನ್ನು ಉದಯ್ ತಂದೆ ಅಲ್ಲಗಳೆದಿದ್ದಾರೆ. "ಒಂದೇ ಕಡೆ ಅಂತ್ಯಸಂಸ್ಕಾರ ಮಾಡುವುದಿಲ್ಲ. ಅವರ ಶಾಸ್ತ್ರವೇ ಬೇರೆ, ನಮ್ಮ ಶಾಸ್ತ್ರವೇ ಬೇರೆ. ನಮ್ಮ ನೆಂಟರಿಷ್ಟರ ಸಮ್ಮುಖದಲ್ಲಿ ನಾವು ಮಣ್ಣ ಮಾಡಲು ನಿರ್ಧರಿಸಿದ್ದೇವೆ" ಎಂದವರು ಸ್ಪಷ್ಟಪಡಿಸಿದರು.

ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬನಶಂಕರಿಯಲ್ಲಿರುವ ರುದ್ರಭೂಮಿಯಲ್ಲಿ ರಾಘವ ಉದಯ್'ನ ಅಂತ್ಯಸಂಸ್ಕಾರ ನೆರವೇರಲು ನಿಶ್ಚಯಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!