
ಬೆಂಗಳೂರು[ನ.06] ಉಪಚುನಾವಣೆ ಫಲಿತಾಂಶ ಹೊರಬಂದಿದ್ದು ರಾಜಕೀಯ ಪಕ್ಷಗಳು ಸೋಲು ಗೆಲುವಿನ ಲೆಕ್ಕಾಚಾರ ಹಾಕುತ್ತಿವೆ. ಯಾರಿಗೆ ನಷ್ಟ-ಯಾರಿಗೆ ಲಾಭ ಚರ್ಚೆ ಆರಂಭವಾಗಿದೆ.
ಪದೇ ಪದೇ ಕೇಳಿಬರುತ್ತಿರುವ ಕುಟುಂಬ ರಾಜಕಾರಣಕ್ಕೆ ಈ ಚುನಾವಣೆಯೂ ಹೊರತಾಗಿಲಲ್ಲ. ಜನರು ಸಹ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದಾರೆಯೇ? ಬಹುತೇಕ ಸತ್ಯ ಎಂದೇ ಭಾವಿಸಬೇಕಾಗಿದೆ.
ಬೈ ಎಲೆಕ್ಷನ್ ಕಂಪ್ಲೀಟ್ ಡಿಟೇಲ್ಸ್
ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ಇದೀಗ ಅಲ್ಲಿ ಅವರ ಪುತ್ರ ಬಿ ವೈ ರಾಘವೇಂದ್ರ ಗೆಲುವು ದಾಖಲಿಸಿದ್ದಾರೆ.
ಜಮಖಂಡಿಯಲ್ಲಿ ಸಿದ್ದು ನ್ಯಾಮಗೌಡ ನಿಧನದಿಂದ ಚುನಾವಣೆ ನಡೆದಿತ್ತು. ಅಲ್ಲಿ ಅವರ ಪುತ್ರ ಆನಂದ ನ್ಯಾಮಗೌಡ ಜಯಭೇರಿ ಬಾರಿಸಿದ್ದಾರೆ.
ಇನ್ನು ರಾಮನಗರದಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಸ್ಥಾನದಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ.
ಬಳ್ಳಾರಿಯಲ್ಲಿಯೂ ಸಹ ಶ್ರೀರಾಮುಲು ಸಹೋದರಿ ಶಾಂತಾ ಸ್ಪರ್ಧೆ ಮಾಡಿ ಸೋಲು ಕಂಡರು. ಇದ್ದುದರಲ್ಲಿ ಮಂಡ್ಯ ಕ್ಷೇತ್ರ ಮಾಥ್ರ ಕುಟುಂಬ ರಾಜಕಾರಣದಿಂದ ಹೊರತಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.