
ಉಡುಪಿ : ರಂಗದಲ್ಲೇ ಕುಸಿದು ಯಕ್ಷಗಾನ ಕಲಾವಿದರೋರ್ವರು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಬೈಂದೂರಿನ ಜೋಗಿಬೆಟ್ಟು ಗ್ರಾಮದಲ್ಲಿ ಯಕ್ಷಗಾನ ನಡೆಯುತ್ತಿದ್ದ ವೇಳೆಯೇ ಕಲಾವಿದ ಹುಡಗೋಡು ಚಂದ್ರಹಾಸ (52) ಮೃತಪಟ್ಟಿದ್ದಾರೆ.
ಜಲವಳ್ಳಿ ಮೇಳದ ಪ್ರದರ್ಶನ ದಲ್ಲಿ ಸಾಲ್ವನ ಪಾತ್ರ ಮಾಡುತ್ತಿದ್ದ ಅವರು ವೇದಿಕೆಯಲ್ಲಿಯೇ ಕುಸಿದು ಬಿದ್ದು ಮೃತರಾಗಿದ್ದಾರೆ.
ಸಂಭಾಷಣೆ ಮುಗಿಸಿ ಕುಣಿತ ಆರಂಭಿಸುತ್ತಿದ್ದಂತೆ ಹೃದಯಾಘಾತ ಸಂಭವಿಸಿದ್ದು, ರಂಗಸ್ಥಳದಲ್ಲಿಯೇ ಉತ್ತರ ಕನ್ನಡದ ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಕಲಾವಿದ ಚಂದ್ರಹಾಸ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.