
ಬೆಂಗಳೂರು : ಫೋನಿ ಚಂಡಮಾರುತದ ಅರ್ಭಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಹೋಗಬೇಕಿದ್ದ ಆರು ರೈಲುಗಳ ಸಂಚಾರವನ್ನು ನೈಋುತ್ಯ ರೈಲ್ವೆ ಸ್ಥಗಿತಗೊಳಿಸಿದೆ.
ಮೇ 6ರಂದು ಹೊರಡಬೇಕಿದ್ದ ಮೈಸೂರು-ಹೌರಾ ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ 22818), ಮೇ 4ರ ಯಶವಂತಪುರ-ಪುರಿ ಎಕ್ಸ್ಪ್ರೆಸ್ ರೈಲು (ರೈಲು 22884 ಸಂಖ್ಯೆ), ಮೇ 4ರಂದು ಹೌರಾದಿಂದ ಹೊರಡಬೇಕಿದ್ದ ಹೌರಾ-ಯಶವಂತಪುರ ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ 12863), ಹೌರಾ-ಯಶವಂತಪುರ ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ 12864), ಹೌರಾ-ವಾಸ್ಕೊ ಡಾ-ಗಾಮ ರೈಲು (ರೈಲು ಸಂಖ್ಯೆ 12863) ಹಾಗೂ ಮೇ 4ರಂದು ಭುವನೇಶ್ವರದಿಂದ ಹೊರಡಬೇಕಿದ್ದ ಭುವನೇಶ್ವರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು (ರೈಲು ಸಂಖ್ಯೆ 18463) ಸಂಚಾರವನ್ನು ರದ್ದುಗೊಳಿಸಿದೆ.
ಈಗಾಗಲೇ ಫನಿ ಅಬ್ಬರ ಹೆಚ್ಚಾಗಿದ್ದು, ಒಡಿಶಾದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.