
ಮಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಯನ್ನು ಮನಸಾರೆ ಕೊಂಡಾಡಿದ ರಾಹುಲ್ ಗಾಂಧಿ, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತಂದರೆ ರೈತರ 70 ಸಾವಿರ ಕೋಟಿ ರು. ಮೊತ್ತದ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಅಭಿವೃದ್ಧಿ ಕಾರ್ಯದ ಮೂಲಕ ನಾವು ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇವೆ. ಬಿಜೆಪಿಯು ಸಂಘಟನೆಯೊಂದರ ಧ್ವನಿಯಾಗಿದೆ ಎಂದು ಆರ್ ಎಸ್ಎಸ್ನ ಹೆಸರೆತ್ತದೆ ರಾಹುಲ್ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ಕೆಪಿಸಿಸಿ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಲೋಕಸಭೆಯಲ್ಲಿ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ವೀರಪ್ಪ ಮೊಯ್ಲಿ ಸೇರಿದಂತೆ ಕಾಂಗ್ರೆಸ್ನ ಮುಖಂಡರು, ಶಾಸಕರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.