ನೀರಿಲ್ಲದೆ ಗಣೇಶ ವಿಗ್ರಹ ಮಣ್ಣಲ್ಲಿ ಹೂತ ರೈತ!

Published : Sep 13, 2017, 05:52 PM ISTUpdated : Apr 11, 2018, 12:41 PM IST
ನೀರಿಲ್ಲದೆ ಗಣೇಶ ವಿಗ್ರಹ ಮಣ್ಣಲ್ಲಿ ಹೂತ ರೈತ!

ಸಾರಾಂಶ

ಮಳೆಗಾಗಿ ಕತ್ತೆ, ಕಪ್ಪೆಗಳ ಮದುವೆ ಮಾಡುವುದನ್ನು ಕೇಳಿದ್ದೀರಿ. ಆದರೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಸಲಾಪುರದ ರೈತನೋರ್ವ ಗಣೇಶ ಮೂರ್ತಿಯನ್ನು ಹೂಳುವ ಮೂಲಕ ಮಳೆಗಾಗಿ ಪ್ರಾರ್ಥಿಸಿದ್ದಾರೆ.

ಬೆಳಗಾವಿ: ಮಳೆಗಾಗಿ ಕತ್ತೆ, ಕಪ್ಪೆಗಳ ಮದುವೆ ಮಾಡುವುದನ್ನು ಕೇಳಿದ್ದೀರಿ. ಆದರೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಸಲಾಪುರದ ರೈತನೋರ್ವ ಗಣೇಶ ಮೂರ್ತಿಯನ್ನು ಹೂಳುವ ಮೂಲಕ ಮಳೆಗಾಗಿ ಪ್ರಾರ್ಥಿಸಿದ್ದಾರೆ.

ರೈತ ಶಿವಗೌಡ ಪಾಟೀಲ ಗಣೇಶೋತ್ಸವದ ವೇಳೆ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಮೂರ್ತಿಯನ್ನು ತನ್ನ ಜಮೀನಿನಲ್ಲಿ ಹೂತು ಮಳೆಗಾಗಿ ಮೊರೆ ಇಟ್ಟಿದ್ದಾರೆ. ಶಿವಗೌಡ ಅವರು ತಮ್ಮ ಮನೆಯಲ್ಲಿ ಪ್ರತಿವರ್ಷ ಗಣೇಶ ಚತುರ್ಥಿ ವೇಳೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುತ್ತಾರೆ.

ಈ ವರ್ಷ ಪ್ರತಿಷ್ಠಾಪನೆ ಮಾಡುವ ವೇಳೆಯೇ ವಿಗ್ರಹ ವಿಸರ್ಜನೆ ಮಾಡುವ ವೇಳೆಗೆ ಮಳೆ ಬಾರದಿದ್ದರೆ, ಹೂಳುವುದಾಗಿ ಹೇಳಿದ್ದರು. ಆದರೆ ಮಳೆ ಬಾರಲೇ ಇಲ್ಲ. ಕೊನೆಗೂ ಬತ್ತಿ ಬರಿದಾದ ಬಾವಿಗಳಿಗೆ ಗಣೇಶ ಮೂರ್ತಿಯನ್ನು ಇಡುವ ಬದಲು ತಮ್ಮ ಹೊಲದಲ್ಲೇ ಸಂಪ್ರದಾಯಕ್ಕೆ ವಿರುದ್ಧವಾಗಿ ಹೂಳುವ ಮೂಲಕ ಮಳೆಗಾಗಿ ಪ್ರಾರ್ಥಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ