ರೈತ ನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಇನ್ನಿಲ್ಲ

By Suvarna Web DeskFirst Published Feb 18, 2018, 11:14 PM IST
Highlights

ರೈತ ನಾಯಕ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ(69) ನಿಧನ

ಮಂಡ್ಯ: ರೈತಸಂಘ ನಾಯಕ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ. ಪುಟ್ಟಣ್ಣಯ್ಯ 1983 ರಿಂದಲೂ ರಾಜ್ಯ ರೈತಸಂಘದೊಂದಿಗೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಪುಟ್ಟಣ್ಣಯ್ಯ ನಿಧನದಿಂದಾಗಿ ರೈತ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.

 ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಬ್ಬಡಿ ಪಂದ್ಯ ವೀಕ್ಷಣೆ ವೇಳೆ  ಎದೆ ನೋವಿನಿಂದ ಪುಟ್ಟಣ್ಣಯ್ಯ ಕುಸಿದು ಬಿದ್ದಿದ್ದಾರೆ.ಕೂಡಲೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಪುಟ್ಟಣ್ಣಯ್ಯ ಮೃತಪಟ್ಟಿದ್ದಾರೆ.

ಪುಟ್ಟಣ್ಣಯ್ಯ ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಪಾಂಡವಪುರ ತಾಲೂಕು ಕ್ಯಾತನಹಳ್ಳಿ ಗ್ರಾಮದ ಶ್ರೀಕಂಠೇಗೌಡ-ಶಾರದಮ್ಮ ದಂಪತಿ ಪುತ್ರ.

1994 ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ, ಪುಟ್ಟಣ್ಣಯ್ಯ 2013ರಲ್ಲಿ ಸರ್ವೋದಯ ಪಕ್ಷದಿಂದ ಸ್ಪರ್ಧಿಸಿ 2ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.ರೈತರ ಹಿತಾಸಕ್ತಿ ಕಾಪಾಡಲು,  ಕಾವೇರಿ ನದಿ ನೀರು ವಿಚಾರದಲ್ಲಿ ಪುಟ್ಟಣ್ಣಯ್ಯ ನಿರಂತರ ಹೋರಾಟ ಮಾಡಿದ್ದರು.

ಸ್ವಗ್ರಾಮ ಕ್ಯಾತನಹಳ್ಳಿಗೆ ಆ್ಯಂಬುಲೆನ್ಸ್ ಮೂಲಕ ಪುಟ್ಟಣ್ಣಯ್ಯ ಪಾರ್ಥಿವ ಶರೀರ ರವಾನಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ:

ರೈತನಾಯಕ ಪುಟ್ಠಣ್ಣಯ್ಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದಾರೆ.

ಸರ್ವೋದಯ ಪಕ್ಷದ ಶಾಸಕರಾದ ಹಿರಿಯ ರೈತ ಹೋರಾಟಗಾರ ಕೆ.ಎಸ್.ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ. ರೈತ ಚಳುವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ದು:ಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. pic.twitter.com/wXlHJ433sL

— CM of Karnataka (@CMofKarnataka)

ಸಂಸದ ರಾಜೀವ್ ಚಂದ್ರಶೇಖರ್ ಸಂತಾಪ:

ರೈತ ಸಂಘದ ನಾಯಕ ಹಾಗೂ ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹೃದಯಾಘಾತದಿಂದ ನಿಧನ

🙏🏻 pic.twitter.com/qarIjfUGnJ

— Rajeev Chandrasekhar (@rajeev_mp)

 

Sri K S Puttannaiah was a proud farmer, activist and an outstanding leader. He contributed greatly towards our state’s growth. His affable personality will always be remembered. Saddened by his demise. Condolences to his family.

— Dr. G Parameshwara (@DrParameshwara)

 

ಹಿರಿಯ ರೈತ ನಾಯಕ, ರಾಜ್ಯದಲ್ಲಿ ರೈತ ಸಂಘ ಕಟ್ಟಿದ ಸಂಘಟಕ, ವಾಗ್ಮಿಯಾಗಿದ್ದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಅವರ ನಿಧನ ರಾಜ್ಯದ ರೈತ ಹೋರಾಟಕ್ಕಾದ ಹಿನ್ನಡೆ ಎಂದೇ ಭಾವಿಸುತ್ತೇ‌ನೆ. ವಿಧಾನಸಭೆಯಲ್ಲಿ ರೈತಪರವಾದ ಒಂದು ಧ್ವನಿ ಕಡಿಮೆಯಾಯಿತು ಎಂಬ ಕೊರಗು ಉಳಿಯಲಿದೆ. pic.twitter.com/W8hTPrdMSr

— B.S. Yeddyurappa (@BSYBJP)
click me!