ಬಾರದ ಪರಿಹಾರ: ರೈತ ಆತ್ಮಹತ್ಯೆ

Published : Jul 19, 2017, 05:41 PM ISTUpdated : Apr 11, 2018, 12:41 PM IST
ಬಾರದ ಪರಿಹಾರ: ರೈತ ಆತ್ಮಹತ್ಯೆ

ಸಾರಾಂಶ

ಹೆದ್ದಾರಿ ನಿರ್ಮಾಣಕ್ಕಾಗಿ ಪರಿಹಾರ ಮಾತ್ರ ಬಂದಿಲ್ಲ. ಈ ಹಿನ್ನಲೆಯಲ್ಲಿ ಸಿದ್ದಪ್ಪ ನನಗೆ ಸ್ವಾಧೀನಪಡಿಸಿಕೊಂಡ ಭೂಮಿಗೆ ಸರಿಯಾಗಿ ಪರಿಹಾರ ಬಾರದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ  ಡೆತ್‍ನೋಟ್ ಬರೆದಿದ್ದಾರೆ.

ಕೊಪ್ಪಳ(ಜು.19): ಕಳೆದುಕೊಂಡ ಭೂಮಿಗೆ ಸರಿಯಾಗಿ ಪರಿಹಾರ ಬಾರದ ಹಿನ್ನೆಲೆಯಲ್ಲಿ ಮನನೊಂದು ಕೊಪ್ಪಳ ಜಿಲ್ಲೆಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 30 ವರ್ಷದ ಸಿದ್ದಪ್ಪ ಕರಡಿ ಆತ್ಮಹತ್ಯೆ ಮಾಡಿಕೊಂಡ ರೈತ. ಉಪ್ಪಲದಿನ್ನಿ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50 ರ ನಿರ್ಮಾಣಕ್ಕಾಗಿ ರೈತ ಸಿದ್ದಪ್ಪನಿಗೆ ಸೇರಿದ 1 ಎಕರೆ ಭೂಮಯಲ್ಲಿ32 ಗುಂಟೆ  ಸ್ವಾಧೀನವಾಗಿತ್ತು. ಮೊದಲನೆ ಕಂತಲ್ಲಿ ಕೇವಲ 75 ಸಾವಿರ ಪರಿಹಾರ ಬಂದಿತ್ತು. ಇನ್ನು ಹೆಚ್ಚಿನ ಪರಿಹಾರಕ್ಕಾಗಿ ಸಿದ್ದಪ್ಪ ಅರ್ಜಿ ಸಲ್ಲಿಸಿದ್ದ. ಆದರೆ ಹೆದ್ದಾರಿ ನಿರ್ಮಾಣಕ್ಕಾಗಿ ಪರಿಹಾರ ಮಾತ್ರ ಬಂದಿಲ್ಲ. ಈ ಹಿನ್ನಲೆಯಲ್ಲಿ ಸಿದ್ದಪ್ಪ ನನಗೆ ಸ್ವಾಧೀನಪಡಿಸಿಕೊಂಡ ಭೂಮಿಗೆ ಸರಿಯಾಗಿ ಪರಿಹಾರ ಬಾರದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ  ಡೆತ್‍ನೋಟ್ ಬರೆದಿದ್ದಾರೆ. ಜಮೀನಿನ ಮರವೊಂದಕ್ಕೆ ಸಿದ್ದಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದರೆ, ಪರಿಹಾರ ಬಂದಿದೆ. ಹೆಚ್ಚಿನ ಪರಿಹಾರ ಬರಬೇಕಿತ್ತು ಎಂದು ರೈತ ಸಿದ್ದಪ್ಪ ಹೇಳುತ್ತಿದ್ದ ಎಂದು ಗ್ರಾಮಸ್ಥರು ಹೇಳಿದ್ದಾರೆ. ಸ್ಥಳಕ್ಕೆ ಬೇವೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.                       

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೃತ್ತಿಜೀವನಕ್ಕೆ ಹೊಸ ತಿರುವು, ಪ್ರಸಾರ ಭಾರತಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ, 50000 ರೂ ವರೆಗೆ ವೇತನ!
ಸಾಯಲು ಇಷ್ಟವಿಲ್ಲ ಅಪ್ಪ ಕಾಪಾಡು, ಕಾಮಗಾರಿ ಗುಂಡಿಗೆ ಬಿದ್ದು ಮೃತಪಟ್ಟ ಟೆಕ್ಕಿಯ ಕೊನೆಯ ಕರೆ